ಸಾಮೆತ್ತಡ್ಕ ಸ. ಹಿ ಪ್ರಾ. ಶಾಲೆಯಲ್ಲಿ ಅಂಬೇಡ್ಕರ್‌ ಜಯಂತಿ ಆಚರಣೆ

0

ಪುತ್ತೂರು:ಸಾಮೆತ್ತಡ್ಕ ಸ. ಹಿ ಪ್ರಾ. ಶಾಲೆಯಲ್ಲಿ ಅಂಬೇಡ್ಕರ್‌ ಜಯಂತಿ ಆಚರಣೆಯನ್ನು ಏ.14ರಂದು ಎಸ್ಡಿಎಮ್‌ ಸಿ ಅಧ್ಯಕ್ಷ ಶಿವಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆಯಿತು.

ಸಾಮೆತ್ತಡ್ಕ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಗೋಪಾಲ ಕೃಷ್ಣ ಭಟ್ ಕಾರ್ಯಕ್ರಮದ ಕುರಿತು ಮಾತನಾಡಿದರು.ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಶೃತಿ, ಸೇವಾನಿರತರಾದ ರಜನಿ, ಎಸ್ಡಿಎಮ್‌ ಸಿ ಸದಸ್ಯರು, ಪೋಷಕರು, ಅಡುಗೆ ಸಿಬ್ಬಂದಿಗಳು, ಶಿಕ್ಷಕ ವೃಂದದವರು, ಹಿರಿಯ ವಿದ್ಯಾರ್ಥಿ ಮೊಹಮ್ಮದ್ ಫಾಹಿಜ್, ಟ್ರಸ್ಟ್ ಕಾರ್ಯದರ್ಶಿ ಇಂದಿವರ್ ಭಟ್, ಮತ್ತು ವಿದ್ಯಾಭಿಮಾನಿ ದಿನೇಶ್ ಕಾಮತ್ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಗುರು ಮರಿಯಾ ಎಂ. ಎ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here