ಲೋಕಸಭಾ ಚುನಾವಣೆ ಹಿನ್ನೆಲೆ – ನಗರಸಭೆಯಿಂದ ಮತದಾನ ಜಾಗೃತಿ ಜಾಥಾ

0

ಪುತ್ತೂರು: ಲೋಕಸಭಾ ಚುನಾವಣೆ 2024ರ ಮತದಾನ ಜಾಗೃತಿಗಾಗಿ ಪುತ್ತೂರು ನಗರಸಭೆಯಿಂದ ಮತದಾನ ಜಾಗೃತಿ ಜಾಥಾವು ಎ.15ರಂದು ದರ್ಬೆ ವೃತ್ತದಿಂದ ಕಿಲ್ಲೆ ಮೈದಾನದ ತನಕ ನಡೆಯಿತು.


ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಹನುಮ ರೆಡ್ಡಿ ಮತ್ತು ನಗರಸಭೆ ಪೌರಾಯುಕ್ತ ಬದ್ರುದ್ದೀನ್ ಸೌದಾಗರ್ ಅವರು ಜಾಗೃತಿ ಜಾಥಾ ಅಭಿಯಾನಕ್ಕೆ ಚಾಲನೆ ನೀಡಿದರು. ಮತದಾನ ಕುರಿತ ಜಾಗೃತಿಯನ್ನು ವಾಹನದಲ್ಲಿ ಮೈಕ್ ಮೂಲಕ ಪ್ರಚಾರ ಪಡಿಸಿ ನಗರಸಭೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ ಪತ್ರ ಮತ್ತು ಪೊಸ್ಟರ್‌ಗಳನ್ನು ಕೈಯಲ್ಲಿ ಹಿಡಿದು ಕೊಂಡು ದರ್ಬೆ ವೃತ್ತದಿಂದ ಕಿಲ್ಲೆ ಮೈದಾನದ ತನಕ ತೆರಳಿದರು. ತಾ.ಪಂ ಯೋಜನಾಧಿಕಾರಿ ಸುಕನ್ಯ, ನಗರಸಭೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶಬರಿನಾಥ್, ಕೃಷ್ಣಪ್ರಸಾದ್, ಹಿರಿಯ ಆರೋಗ್ಯ ನಿರೀಕ್ಷರಾದ ರಾಮಚಂದ್ರ, ಶ್ವೇತಾ ಕಿರಣ್ ಸಹಿತ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜಾಥಾದಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here