ಕುದ್ಮಾರು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ನಿಧನ

0

ಕಾಣಿಯೂರು: ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಕುದ್ಮಾರು ಗ್ರಾಮದ ನಡುಬೈಲು ಎಂಬಲ್ಲಿ ಅಕೇಶಿಯಾ ಮರದ ಕೊಂಬೆ ಕಡಿಯುವ ವೇಳೆ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಕುದ್ಮಾರು ಗ್ರಾಮದ ಬರೆಪ್ಪಾಡಿ ನಿವಾಸಿ ಎನ್‌ ಪಿ. ಜಯರಾಮ್‌(44ವ) ಸೋಮವಾರ ಮೃತಪಟ್ಟಿದ್ದಾರೆ.

ಅವರು ಕಳೆದ ಗುರುವಾರ ಕುದ್ಮಾರು ಗ್ರಾಮದ ಬರೆಪ್ಪಾಡಿ 10ನೇ ಕಲ್ಲು ಎಂಬಲ್ಲಿರುವ ಹಮೀದ್‌ ಎಂಬವರ ಜಮೀನಿನಲ್ಲಿ ಅಕೇಶಿಯಾ ಮರದ ಕೊಂಬೆ ಕಡಿಯುವ ಕೆಲಸ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಅವರ ಎದೆ ಹಾಗೂ ದೇಹದ ಇತರ ಭಾಗಗಳಿಗೆ ಗಂಭೀರ ಗಾಯವಾಗಿತ್ತು. ಅವರಿಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್‌ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ. ಸಂಪಾಜೆ ಗ್ರಾಮದ ದರ್ಖಾಸು ನಿವಾಸಿ ಜನಾರ್ದನ ಎನ್‌ ಪಿ ಎಂಬವರು ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here