ದ.ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಗೆ ಸಲೀಂ ಬರೆಪ್ಪಾಡಿ ನೇಮಕ

0

ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದ. ಕ ಜಿಲ್ಲಾ ಕಾಂಗ್ರೆಸ್ ನ ಪ್ರಚಾರ ಸಮಿತಿಯ ಸದಸ್ಯರನ್ನಾಗಿ ಯುವ ಮುಖಂಡರಾದ ಸಲೀಂ ಬರೆಪ್ಪಾಡಿ ಅವರನ್ನು ದ.ಕ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಉಸ್ತುವಾರಿ ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ರಮಾನಾಥ ರೈ ಅವರು ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ.

ಸಲೀಂ ಅವರು ಸುಳ್ಯ ಹಾಗೂ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯತ್ ಹಾಗೂ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದಿದ್ದಾರೆ. ಹಾಗೂ ಅನಿವಾಸಿ ಕಾಂಗ್ರೆಸ್ ಘಟಕದ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here