ಮೂಜೂರು ಮುಂಡಡ್ಕ ಓಟೆಕಜೆ ಪ್ರದೇಶಕ್ಕೆ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಆಗ್ರಹ-ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ-ಬ್ಯಾನರ್ ಅಳವಡಿಕೆ

0

ಕಡಬ: ನೆಟ್ಟಣ ಸಮೀಪದ ಮೂಜೂರು, ಮುಂಡಡ್ಕ, ಓಟೆಕಜೆ ಪ್ರದೇಶಕ್ಕೆ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಆ ಭಾಗದ ಮತದಾರರು ಮುಂದಿನ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಈ ಬಗ್ಗೆ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದು ಈ ಹಿನ್ನಲೆಯಲ್ಲಿ ಕಡಬ ಉಪತಹಸೀಲ್ದಾರ್ ಮನೋಹರ್ ಕೆ.ಟಿ. ಹಾಗೂ ಗ್ರಾಮಕರಣಿಕರು, ಅಧಿಕಾರಿಗಳು ಭೇಟಿ ನೀಡಿ ಸೇತುವೆ ನಿರ್ಮಾಣ ಬೇಡಿಕೆ ಕುರಿತು ಸರ್ಕಾರಕ್ಕೆ ಬರೆಯುವ ಬಗ್ಗೆ ಭರವಸೆ ನೀಡಿ ಮತದಾನದಲ್ಲಿ ಭಾಗವಹಿಸುವಂತೆ ಗ್ರಾಮಸ್ಥರ ಮನವೊಲಿಸಿ ಬ್ಯಾನರ್ ತೆರವು ಮಾಡಿದ್ದಾರೆ. ಈ ಸಂದರ್ಭದಲ್ಲಿ ಐತ್ತೂರು ಗ್ರಾ.ಪಂ. ಸದಸ್ಯ ಮನಮೋಹನ ಗೊಳ್ಯಾಡಿ, ಬಿಳಿನೆಲೆ ಗ್ರಾ.ಪಂ. ಅಧ್ಯಕ್ಷೆ ಶಾರದಾ ಬಿಳಿನೆಲೆ, ವಿಜೇಶ್ ಬಿಳಿನಲೆ ಸೇರಿದಂತೆ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here