ಮಡಿಕೇರಿ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಸಂಯೋಜಕರಾಗಿ ಪ್ರದೀಪ್ ಕುಮಾರ್ ರೈ ಪಾಂಬಾರು ನೇಮಕ

0

ಪುತ್ತೂರು: 2024ನೇ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಕೆಪಿಸಿಸಿ ಸಂಯೋಜಕರನ್ನು ನೇಮಕ ಮಾಡುತ್ತಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಸಂಯೋಜಕರಾಗಿ ಕಾಂಗ್ರೆಸ್ ಮುಂದಾಳು, ಉದ್ಯಮಿ ಪ್ರದೀಪ್ ಕುಮಾರ್ ರೈ ಪಾಂಬಾರುರವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ನೇಮಕಾತಿಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್‌ರವರು ಮಾಡಿದ್ದಾರೆ.

ಪ್ರದೀಪ್ ಕುಮಾರ್ ರೈ ಪಾಂಬಾರುರವರು ಮಂಗಳೂರು ವಿಶ್ವವಿದ್ಯಾನಿಲಯದ ಚುನಾಯಿತ ಸೆನೆಟ್ ಸದಸ್ಯರಾಗಿ, ಎನ್‌ಎಸ್‌ಯುಐಯ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಕೊಡಗು ಜಿಲ್ಲಾ ಎನ್‌ಎಸ್‌ಯುಐ ಯ ಉಸ್ತುವಾರಿಯಾಗಿ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ, ಹುಬ್ಬಳ್ಳಿ ಧಾರವಾಡ ಜಿಲ್ಲಾ ಯುವ ಕಾಂಗ್ರೆಸ್‌ನ ಉಸ್ತುವಾರಿಯಾಗಿ, ರಾಜ್ಯ ಇಂಟಕ್‌ನ ಉಪಾಧ್ಯಕ್ಷರಾಗಿ, ಈ ಹಿಂದೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬನವಾಸಿ ಬ್ಲಾಕ್‌ನ ಉಸ್ತುವಾರಿಯಾಗಿ, ಕೊಡಗು ಜಿಲ್ಲೆಯ ಕುಶಾಲನಗರ ಬ್ಲಾಕ್ ಕಾಂಗ್ರೆಸ್‌ನ ಸಂಯೋಜಕರಾಗಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ, ಪ್ರಸ್ತುತ ಮಂಗಳೂರು ವಿಧಾನಸಭಾ ಕ್ಷೇತ್ರದ ಉಳ್ಳಾಲ ಬ್ಲಾಕ್‌ನ ಉಸ್ತುವಾರಿಯಾಗಿ, ಎಐಸಿಸಿಯಿಂದ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಉಸ್ತುವಾರಿಯಾಗಿ, ದ.ಕ ಜಿಲ್ಲಾ ಸೌಹಾರ್ದ ಸಮಿತಿಯ ಅಧ್ಯಕ್ಷರಾಗಿ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಹಿರಿಯ ಕಾಂಗ್ರೆಸ್ ಮುಖಂಡ ದಿ.ಪಾಂಬಾರು ಸುಬ್ಬಣ್ಣ ರೈಯವರ ಪುತ್ರರಾಗಿದ್ದಾರೆ.

LEAVE A REPLY

Please enter your comment!
Please enter your name here