ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ, ಆಶೀರ್ವದಿಸಿದ ಶ್ರೀ

0

ಸುಬ್ರಹ್ಮಣ್ಯ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.ಬಳಿಕ ಸುಬ್ರಹ್ಮಣ್ಯ ಮಠಕ್ಕೆ ತೆರಳಿ, ಶ್ರೀ ವಿದ್ಯಾ ಪ್ರಸನ್ನ ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಬಳಿಕ ಕುಕ್ಕೆ ವ್ಯಾಪ್ತಿಯಲ್ಲಿ ಜನರ ಬೆಂಬಲ ಕೋರಿ ಮತಯಾಚನೆ ನಡೆಸಿದರು.ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕೆಪಿಸಿಸಿ ಪ್ರ. ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಶೆಟ್ಟಿ, ಸಂಯೋಜಕ ಪಿ.ಪಿ. ವರ್ಗೀಸ್, ಸರ್ವೋತ್ತಮ ಗೌಡ, ವೆಂಕಪ್ಪ ಗೌಡ, ಬಾಲಕೃಷ್ಣ ಬಳ್ಳೇರಿ, ಅಶೋಕ್ ನೆಕ್ರಾಜೆ,ಜಿ. ಕೃಷ್ಣಪ್ಪ, ಯೂತ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್, ವಿಮಲಾ ರಂಗಯ್ಯ, ಕಿರಣ್ ಬುಡ್ಲೆಗುತ್ತು, ಸತೀಶ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here