ವಿವೇಕಾನಂದ ಕಾಲೇಜಿನಲ್ಲಿ ಮತದಾನ ಜಾಗೃತಿ ಅಭಿಯಾನ-ಬೀದಿ ನಾಟಕ

0

ಪುತ್ತೂರು: ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ದ.ಕ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಆಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ಇರದ ಸಹಯೋಗದಲ್ಲಿ ಮಹಿಳಾ ಕಾಲೇಜು ಪುತ್ತೂರು ವಿದ್ಯಾರ್ಥಿಗಳ ತಂಡದಿಂದ ಮತದಾನ ಜಾಗೃತಿ ಅಭಿಯಾನದ ಬೀದಿ ನಾಟಕ ನಡೆಯಿತು. ಸಾರ್ವತ್ರಿಕ ಲೋಕಸಭಾ ಚುನಾವಣೆ 2024 ಇದರ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಸಹ ಮತದಾನವನ್ನು ಮಾಡಬೇಕು ಎಂಬ ದೃಷ್ಟಿಯಿಂದ ವಿದ್ಯಾರ್ಥಿಗಳಿಗಾಗಿ ಕಾಲೇಜಿನಾವರಣದಲ್ಲಿ ಜಾಗೃತಿ ಅಭಿಯಾನ ನಡೆಯಿತು.

ಪುತ್ತೂರು ತಾಲೂಕು ಪಂಚಾಯತ್ ಮಾಹಿತಿ ಶಿಕ್ಷಣ ಸಂವಹನ ಸಂಯೋಜಕ ಭರತ್ ರಾಜ್,ಪ್ರಥಮ ದರ್ಜೆ ಸಹಾಯಕಿ ತುಳಸಿ, ಪತ್ರಕರ್ತ ರಂಗಕರ್ಮಿ ಮೌನೇಶ್ ,ಕಾಲೇಜಿನ ವಿಶೇಷಾಧಿಕಾರಿ ಡಾ.ಶ್ರೀಧರ ನಾಯಕ್, ಸಮಾಜ ಶಾಸ್ತ್ರದ ಮುಖ್ಯಸ್ಥೆ ವಿದ್ಯಾ ಎಸ್, ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಡಾ.ವಿಷ್ಣುಕುಮಾರ್ ಎವ್ಯವಹಾರ ನಿರ್ವಹಣಾ ವಿಭಾಗದ ಉಪನ್ಯಾಸಕಿ ದೀಪಿಕಾ ಎಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here