ಪಾಲ್ತಾಡಿ : ಮಂಜುನಾಥನಗರದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

0

ದೇಶದಲ್ಲಿ ಮೋದಿ ಜನಪ್ರಿಯತೆಯಿಂದ ಕಾಂಗ್ರೆಸ್‌ಗೆ ಹತಾಶೆ – ರಾಕೇಶ್ ರೈ ಕೆಡೆಂಜಿ

ಸವಣೂರು : ದೇಶದಲ್ಲಿ ಮೋದಿ ಜನಪ್ರಿಯತೆಯಿಂದ ಕಾಂಗ್ರೇಸ್ ಗೆ ಹತಾಶೆಯಾಗಿ, ಭವ್ಯ ಭಾರತದ ಬೆಳವಣಿಗೆಗೆ ನರೇಂದ್ರ ಮೋದಿ ಸರಕಾರ ಬರುವಂತಾಗಲು ಬಿಜೆಪಿಗೆ ಮತನೀಡಿ ದೇಶ ಸುಭದ್ರಗೊಳಿಸಿ ಎಂದು ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಹೇಳಿದರು.

ಅವರು ಪಾಲ್ತಾಡಿ ಗ್ರಾಮದ ಮಂಜುನಾಥನಗರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ವೇದಿಕೆಯಲ್ಲಿ ಬಿಜೆಪಿ ಸುಳ್ಯ ಮಂಡಲದ ಲೋಕಸಭಾ ಚುನಾವಣಾ ನಿರ್ವಹಣಾ ಸಮಿತಿಯ ಸಹ ಸಂಚಾಲಕ ದಿನೇಶ್ ಮೆದು, ಸವಣೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ತಾರಾನಾಥ ಕಾಯರ್ಗ ಉಪಸ್ಥಿತರಿದ್ದರು. ಸಭೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಮತಗಳನ್ನು ಪಡೆಯುವ ನಿಟ್ಟಿನಲ್ಲಿ ಕಾರ್ಯಕರ್ತರು ಮಾಡುವ ಕೆಲಸಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ಸುಂದರಿ, ಸದಸ್ಯರಾದ ಸತೀಶ್ ಅಂಗಡಿಮೂಲೆ, ಹರಿಕಲಾ ರೈ ಮೊದಲಾದವರಿದ್ದರು. ಬಿಜೆಪಿ ಬೂತ್ 70 ಅಧ್ಯಕ್ಷ ಅನ್ನಪೂರ್ಣ ಪ್ರಸಾದ್ ರೈ ಬೈಲಾಡಿ ಸ್ವಾಗತಿಸಿ, ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷ ಇಂದಿರಾ ಬಿ.ಕೆ ವಂದಿಸಿದರು.

LEAVE A REPLY

Please enter your comment!
Please enter your name here