ಕಡಬದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ, ರೋಡ್ ಶೋ

0

ಕಡಬ: ಸ್ವಾತಂತ್ರ್ಯಾನಂತರ ದೇಶದಲ್ಲಿ ಅಭಿವೃದ್ಧಿಯ ಶಕೆಯನ್ನು ಆರಂಭಿಸಿದ್ದು ಕಾಂಗ್ರೆಸ್ ನೇತೃತ್ವದ ಸರಕಾರಗಳು. ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ನೀಡಿರುವ ಕೊಡುಗೆ ಅನನ್ಯವಾದುದು ಎಂದು ದ.ಕ.ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಹೇಳಿದರು.


ಶುಕ್ರವಾರ ರಾತ್ರಿ ಕಡಬ ಪೇಟೆಯಲ್ಲಿ ಜರಗಿದ ಚುನಾವಣಾ ಪ್ರಚಾರ ಸಭೆ ಹಾಗೂ ರೋಡ್ ಶೋದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಿಜೆಪಿ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಮತ ಪಡೆದು ಕೇಂದ್ರದಲ್ಲಿ ಅಽಕಾರಕ್ಕೇರಿದೆ. ಆದರೆ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸದೆ ವಂಚಿಸಿದೆ. ಆದುದರಿಂದ ಈ ಬಾರಿ ಜನರು ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ತೀರ್ಮಾನಿಸಿದ್ದಾರೆ ಎಂದ ಅವರು, ಮತದಾನ ನಮ್ಮ ಹಕ್ಕು. ಇದರ ಮಹತ್ವವನ್ನು ಅರಿತುಕೊಂಡು ಮತ ಚಲಾಯಿಸಲು ಜನರಿಗೆ ಅರಿವು ಮೂಡಿಸಬೇಕು. ಇಂದಿನ ಪರಿಸ್ಥಿತಿಯಲ್ಲಿ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅನಿವಾರ್ಯತೆಯನ್ನು ಜನರಿಗೆ ಮನಗಾಣಿಸಿ, ಅಭಿವೃದ್ಧಿಯ ದೃಷ್ಟಿಯಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದರೆ ಜನರಿಗೆ ಸಿಗುವ ಗ್ಯಾರೆಂಟಿ ಯೋಜನೆಗಳ ಬಗ್ಗೆ ತಿಳಿಸಿ ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.


ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕರ್ನಾಟಕ ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಪಿ.ಪಿ. ವರ್ಗೀಸ್, ಸರ್ವೋತ್ತಮ ಗೌಡ, ವೆಂಕಪ್ಪ ಗೌಡ, ಬಾಲಕೃಷ್ಣ ಗೌಡ ಬಳ್ಳೇರಿ, ವಿಜಯ್ ಕುಮಾರ್ ಸೊರಕೆ, ಕೆ.ಪಿ. ತೋಮಸ್, ಡಾ. ರಘು, ಜಿ. ಕೃಷ್ಣಪ್ಪ, ಸೈಮನ್ ಸಿ.ಜೆ., ಅಭಿಲಾಷ್, ಉಷಾ ಅಂಚನ್, ಫಝಲ್ ಕೋಡಿಂಬಾಳ, ಗಣೇಶ್ ಕೈಕುರೆ ಎ.ಸಿ. ಜಯರಾಜ್, ಆಶಾ ಲಕ್ಷ್ಮಣ್, ಕಿರಣ್ ಬುಡ್ಲೆಗುತ್ತು, ಶರೀಫ್, ಸತೀಶ್ ನಾಯಕ್ ಮೇಲಿನಮನೆ, ಅಶ್ರಫ್ ಶೇಡಿಗುಂಡಿ, ಕೆ.ಎಂ.ಹನೀಫ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here