ಪುತ್ತೂರು: ಬಿಜೆಪಿ ಸರಕಾರದ ಸಾಧನೆಗಳನ್ನು ಮತದಾರರಿಗೆ ತಲುಪಿಸುವ ನಿಟ್ಟಿನಲ್ಲಿ ಬಿಜೆಪಿ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದಿಂದ ಬೀದಿ ನಾಟಕ ನಡೆಯುತ್ತಿದ್ದು ಎ.22 ರಂದು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಬೀದಿ ನಾಟಕ ಪ್ರದರ್ಶನಗೊಂಡಿತು.
![](https://puttur.suddinews.com/wp-content/uploads/2024/04/4c1a106d-d811-4259-ba18-584c43c3b648.jpg)
ರಂಗ ಕಲಾವಿದ ಸಂಯೋಜನೆಯ ಬೀದಿ ನಾಟಕವನ್ನು ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ ಜೀವಂಧರ್ ಜೈನ್ ಉದ್ಘಾಟಿಸಿದರು. ಬಿಜೆಪಿ ನಗರ ಮಂಡಲದ ಉಪಾಧ್ಯಕ್ಷ ಇಂದು ಶೇಖರ್, ನಗರಸಭೆ ಸದಸ್ಯರು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.