ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ಹನುಮಗಿರಿ ಜಾತ್ರೆ, ದರ್ಶನ ಬಲಿ

0

ಪುತ್ತೂರು: ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ಶ್ರೀ ಹನುಮ ಜಯಂತಿಯಂದು ಹನುಮಗಿರಿ ಜಾತ್ರೆ, ದರ್ಶನ ಬಲಿ, ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಏ.21ರಂದು ಮಧ್ಯಾಹ್ನ 12 ಗಂಟೆಗೆ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 6 ಗಂಟೆಗೆ ಉಗ್ರಾಣ ತುಂಬುವುದು, ರಾತ್ರಿ 7.30ಕ್ಕೆ ಸಹಸ್ರ ದೀಪಾಲಂಕಾರ ಸಹಿತ ರಂಗಪೂಜೆ, ಪವಮಾನ ರಥೋತ್ಸವ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಏ.22ರಂದು ಬೆಳಿಗ್ಗೆ 10 ಗಂಟೆಯಿಂದ ನಾಗತಂಬಿಲ, ಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 5.30 ರಿಂದ ತಾಯಂಬಕ ಸೇವೆ, ಮಹಾಪೂಜೆ, ಶ್ರೀ ದೇವರ ಬಲಿ ಹೊರಡುವುದು, ಉತ್ಸವ ಬಲಿ, ಬೆಡಿ ಸೇವೆ, ಕಟ್ಟೆಪೂಜೆ, ಅನ್ನಸಂತರ್ಪಣೆ ನಡೆಯಿತು. ಏ.23ರಂದು ಹನುಮಜಯಂತಿಯಂದು ಬೆಳಿಗ್ಗೆ 10 ಗಂಟೆಗೆ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಿತು. ಆಡಳಿತ ಧರ್ಮದರ್ಶಿ ನನ್ಯ ಅಚ್ಯುತ ಮೂಡೆತ್ತಾಯ, ಧರ್ಮದರ್ಶಿ ಶಿವರಾಮ ಪಿ, ಶಿವರಾಮ ಶರ್ಮ ಕತ್ರಿಬೈಲು, ನಾಗರಾಜ ನಡುವಡ್ಕ, ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here