ಕುಂಬ್ರ ಪೇಟೆಯಲ್ಲಿ ಬಿಜೆಪಿ ಪ್ರಮುಖರಿಂದ ಮತಯಾಚನೆ

0

ಪುತ್ತೂರು: ಏ.26ರಂದು ನಡೆಯುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಏ.24 ರಂದು ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಇದರ ವತಿಯಿಂದ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪರವಾಗಿ ಕುಂಬ್ರ ಪೇಟೆಯಲ್ಲಿ ಬಿಜೆಪಿ ಮುಖಂಡರು ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಅರುಣ್ ಕುಮಾರ್ ಪುತ್ತಿಲ, ಸಾಜ ರಾಧಾಕೃಷ್ಣ ಆಳ್ವ, ರಾಜೇಶ್ ರೈ ಪರ್ಪುಂಜ, ನಿತೀಶ್ ಕುಮಾರ್ ಶಾಂತಿವನ, ಎಸ್ ಮಾಧವ ರೈ ಕುಂಬ್ರ, ಚನಿಲ ತಿಮ್ಮಪ್ಪ ಶೆಟ್ಟಿ, ಪುರಂದರ ಶೆಟ್ಟಿ ಮುಡಾಲ, ನಾರಾಯಣ್ ಪೂಜಾರಿ ಕುರಿಕ್ಕಾರ ತ್ರಿವೇಣಿ ಪಲ್ಲತ್ತಾರು, ಉಷಾ ನಾರಾಯಣ್ ಸೇರಿದಂತೆ ಜಿಲ್ಲೆಯ ಹಾಗೂ ಮಂಡಲದ ಬಿಜೆಪಿ ಪ್ರಮುಖರು ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here