ಅನಂತಾಡಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆ

0

ವಿಟ್ಲ: ಗ್ರಾಮಗಳ ಅಭಿವೃದ್ಧಿ, ಮಹಿಳೆಯರಿಗೆ ಗೌರವ ಸಿಗುವಂತೆ ಮಾಡುತ್ತೇನೆ, ಯುವ ಸಮುದಾಯಕ್ಕೆ ಉದ್ಯೋಗ, ಹಳ್ಳಿಗಳಲ್ಲಿ ಸ್ವಾಭಿಮಾನದ ಬದುಕು ನೀಡುವ ರೀತಿಯಲ್ಲಿ ಜಿಲ್ಲೆಯನ್ನು ಅಭೂತಪೂರ್ವವಾಗಿ ಅಭಿವೃದ್ಧಿ ಮಾಡಿ ತೋರಿಸುತ್ತೇನೆ ಎಂದು ದ.ಕ. ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಅವರು ಅನಂತಾಡಿಯಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ದೇಶದ್ರೋಹದ ಕೆಲಸ ಮಾಡಿದವರ ಮೇಲೆ ಕನಿಷ್ಟ ಖಂಡನೆಯನ್ನು ವ್ಯಕ್ತಪಡಿಸದ ಕಾಂಗ್ರೆಸ್‌ನ ಮಾನಸಿಕತೆಯ ಬಗ್ಗೆ ಬೇಸರವಾಗುತ್ತಿದೆ, ಹಿಂದೂ ಭಾವನೆಗಳಿಗೆ ಗೌರವ ನೀಡದ ರಾಜ್ಯ ಕಾಂಗ್ರೆಸ್ ಸರಕಾರದಿಂದ ಆಗುತ್ತಿರುವ ಅನ್ಯಾಯಗಳು ಜನರಿಗೆ ಅರ್ಥವಾಗಿದೆ. ದೇಶವನ್ನು ಇಬ್ಬಾಗ ಮಾಡಿದ ಕಾಂಗ್ರೆಸ್ ಸರಕಾರದ ಆಡಳಿತವನ್ನು 2024ರ ಚುನಾವಣೆ ಮೂಲಕ ಅಂತ್ಯವನ್ನು ಕಾಣಿಸಬೇಕಾಗಿದೆ. ನಾಚಿಕೆ ಮಾನ ಮರ್ಯಾದೆ ಇಲ್ಲದ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರ ದೇಶದ್ರೋಹದ ಕೆಲಸ ಮಾಡಿದವರ ಜೊತೆ ಸೇರಿಕೊಂಡು ಚುನಾವಣೆಯನ್ನು ಎದುರಿಸುತ್ತಿದೆ ಎಂದು ಚೌಟ ಆರೋಪಿಸಿದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ರವರು ಮಾತನಾಡಿ, ವೈಯಕ್ತಿಕ ಏನೇ ಕೆಲಸಗಳಿದ್ದರು ಎಲ್ಲವನ್ನೂ ಬದಿಗಿಟ್ಟು ದೇಶದ ಹಿತದೃಷ್ಟಿಯಿಂದ ಏ.26ರಂದು ಮತದಾನ ಮಾಡಿ, ಬಿಜೆಪಿಯ ಅಭ್ಯರ್ಥಿ ಬ್ರಿಜೇಶ್ ಚೌಟ ಅವರಿಗೆ ಮತನೀಡಿ ಎಂದು ಮನವಿ ಮಾಡಿದರು. ದೇಶ ಸುಭದ್ರವಾಗಿರಬೇಕು ಎಂದಾದರೆ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು ಎಂದು ತಿಳಿಸಿದರು. ಬಂಟ್ವಾಳ ಮಂಡಲದ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಆರ್ ಕೋಟ್ಯಾನ್, ಗ್ರಾ.ಪಂ.ಅಧ್ಯಕ್ಷೆ ಸುಜಾತ ಸುರೇಶ್ ಪೂಜಾರಿ ಅನಂತಾಡಿ, ಮಾಜಿ ಸಚಿವ ನಾಗರಾಜ ಶೆಟ್ಟಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ತಾ.ಪಂ.ಮಾಜಿ ಸದಸ್ಯ ಮಾಧವ ಮಾವೆ, ಚುನಾವಣಾ ಪ್ರಭಾರಿಗಳಾದ ಪೂಜಾ ಪೈ,ಜಗದೀಶ್ ಶೇಣವ, ಜಿಲ್ಲಾ ಕಾರ್ಯದರ್ಶಿ ದೇವಪ್ಪ ಪೂಜಾರಿ, ಪ್ರಮುಖರಾದ ಸಂದೇಶ್ ಶೆಟ್ಟಿ, ಸನತ್ ಕುಮಾರ್ ರೈ, ಆರವಿಂದ ರೈ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here