ವಿಠ್ಠಲ್ ಜೇಸಿ ಶಾಲಾ ಆಡಳಿತಸೌಧಕ್ಕೆ ಶಿಲಾನ್ಯಾಸ

0

ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಕಟ್ಟಡದ ನಿರ್ಮಾಣ: ಎಲ್.ಎನ್.ಕೂಡೂರು

ವಿಟ್ಲ: ವಿಟ್ಲ ಬಸವನಗುಡಿಯ ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆಡಳಿತಸೌಧಕ್ಕೆ ನಿವೃತ್ತ ಪ್ರಾಂಶುಪಾಲ ಮತ್ತು ಪುರೋಹಿತರಾದ ಬಟ್ರುಪ್ಪಾಡಿ ರಾಧಾಕೃಷ್ಣ ಭಟ್ ರವರ ಪೌರೋಹಿತ್ಯದಲ್ಲಿ ಸಂಸ್ಥೆಯ ಆಧ್ಯಕ್ಷ ಎಲ್.ಎನ್ ಕೂಡೂರುರವರು ಶಿಲಾನ್ಯಾಸ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಉತ್ತಮ ಸೇವೆಯನ್ನು ನೀಡುವ ದೆಸೆಯಿಂದ ನೂತನ ಕಚೇರಿ, ವಾಚನಾಲಯ, ಗಣಕಶಾಸ್ತ್ರ ವಿಭಾಗ ಹಾಗೂ ಸಂಸ್ಥೆಯ ಆಡಳಿತ ನಿರ್ದೇಶಕರ ಕಚೇರಿಗಳು ಕ್ಷಿಪ್ರಗತಿಯಲ್ಲಿ ರೂಪುಗೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಶ್ರೀಧರ ಶೆಟ್ಟಿ, ಕಾರ್ಯದರ್ಶಿ ಮೋಹನ ಎ, ಜತೆಕಾರ್ಯದರ್ಶಿ ಶ್ರೀಪ್ರಕಾಶ್ ಕುಕ್ಕಿಲ, ನಿರ್ದೇಶಕ ಹಸನ್ ವಿಟ್ಲ, ಜೇಸಿ ಅಧ್ಯಕ್ಷ ಹಾಗೂ ಕಟ್ಟಡ ಇಂಜಿನಿಯರ್ ಸಂತೋಷ್ ಕುಮಾರ್ ಪೆಲತಡ್ಕ, ಆಡಳಿತಾಧಿಕಾರಿ ರಾಧಾಕೃಷ್ಣ ಎ, ಪ್ರಾಂಶುಪಾಲರಾದ ಜಯರಾಮ ರೈ, ಉಪಾಪ್ರಾಂಶುಪಾಲೆ ಜ್ಯೋತಿ ಶೆಣೈ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here