ನ್ಯಾಯಾಲಯದಿಂದ ಪ್ರಜ್ವಲ್ ರೈ ಗಡಿಪಾರು ಆದೇಶಕ್ಕೆ ತಡೆ

0

ಪುತ್ತೂರು : ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗದ ದಂಡಾಧಿಕಾರಿಯವರು ಹೊರಡಿಸಿದ್ದ ಎ.ಆರ್. ವಾರಿಯರ್ಸ್ ಮುಖ್ಯಸ್ಥ ಪ್ರಜ್ವಲ್ ರೈ ಪಾತಾಜೆ ಅವರಿಗೆ ಗಡಿಪಾರು ಆದೇಶಕ್ಕೆ ನ್ಯಾಯಾಲಯ ತಡೆ ನೀಡಿದೆ.

ಪ್ರಜ್ವಲ್ ರೈ ಪಾತಾಜೆಯವರ ವಿರುದ್ದ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕಾನೂನು ಉಲ್ಲಂಘನೆ ಮಾಡಿರುವ ಕುರಿತಾಗಿ ಪ್ರಕರಣಗಳು ದಾಖಲಾಗಿದ್ದು,ರಾಜಕೀಯ ಪಕ್ಷವೊಂದರಲ್ಲಿಯೂ ಗುರುತಿಕೊಂಡಿದ್ದಾರೆ. ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ 55ರಂತೆ ಬಳ್ಳಾರಿ ಜಿಲ್ಲೆಯ ಬ್ರೂಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಗೆ ಅವರನ್ನು ಗಡಿಪಾರು ಮಾಡಲು ಶಿಫಾರಸ್ಸು ಮಾಡಲಾಗಿತ್ತು. ಪುತ್ತೂರಿನ ನ್ಯಾಯವಾದಿಗಳಾದ ಧನಂಜಯ ಕುಮಾರ್ ಮತ್ತು ಚಿನ್ಮಯ್ ರೈ ಈಶ್ವರಮಂಗಲ ವಾದಿಸಿ ತಡೆಯಾಜ್ಞೆ ತಂದಿದ್ದಾರೆ.

LEAVE A REPLY

Please enter your comment!
Please enter your name here