ಗ್ಯಾರಂಟಿ ಫಲಾನುಭವಿಗಳು ಕೈ ಬಿಡಲ್ಲ ಎಂಬ ಪೂರ್ಣ ವಿಶ್ವಾಸವಿದೆ – ಪದ್ಮರಾಜ್ ಪೂಜಾರಿಯವರು ಗೆಲ್ಲುತ್ತಾರೆ: ಶಾಸಕ ಅಶೋಕ್ ರೈ

0

ಪುತ್ತೂರು: ಲೋಕಸಭಾ ಚುನಾವಣೆಯಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪದ್ಮರಾಜ್ ಆರ್ ಪೂಜಾರಿವಯರು ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ. ಈ ಭಾರಿಯ ಚುನಾವಣೆ ಎಂದಿನಂತೆ ಇರದೆ ರಾಜ್ಯದ ಕಾಂಗ್ರೆಸ್ ಸರಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಕಾಂಗ್ರೆಸ್ ಪರವಾಗಿ ಮತ ಹಾಕಿರಬಹುದು ಎಂಬ ಪೂರ್ಣ ವಿಶ್ವಾಸವಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಜನಪರ ಮತ್ತು ಭ್ರಷ್ಟಾಚಾರ ರಹಿತ ಆಡಳಿತದಿಂದ ಜನ ಸಂತೃಪ್ತರಾಗಿದ್ದು ಮತ್ತು ಗ್ಯಾರಂಟಿ ಯೋಜನೆಯಿಂದ ಜನರ ಬದುಕು ಉತ್ತಮವಾಗಿದೆ ಮತ್ತು ಕಾಂಗ್ರೆಸ್ ಪ್ರಣಾಳಿಕೆಯೂ ಜನಪರವಾಗಿರುವ ಕಾರಣ ಜನ ನಮ್ಮನ್ನು ಬೆಂಬಲಿಸಲಿದ್ದಾರೆ. ಶಾಂತಿಯುತವಾಗಿ ಜಿಲ್ಲೆಯಲ್ಲಿ ಮತದಾನ ನಡೆದಿದ್ದು, ಅಭಿನಂದನಾರ್ಹ ಇದಕ್ಕಾಗಿ ಎಲ್ಲರಿಗೂ ಅಭಿನಂದನೆಯನ್ನು ಸಲ್ಲಿಸುತ್ತೇನೆ.

LEAVE A REPLY

Please enter your comment!
Please enter your name here