ಮಳೆಗಾಗಿ ಶ್ರೀ‌ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಪರ್ಜನ್ಯ ಜಪ: ಶಾಸಕರು ಭಾಗಿ

0

ಪುತ್ತೂರು: ಮಳೆ ಇಲ್ಲದೆ ಕರಾವಳಿ ಬಿಸಿ ತಾಪದಿಂದ ಕೂಡಿದ್ದು ಜನ‌ಸಂಕಷ್ಡ ಎದುರಿಸುವಂತಾಗಿದ್ದು ಶೀಘ್ರ ಮಳೆ ಪ್ರಾಪ್ತಿಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ಶಾಸಕರ ಸೂಚನೆಯಂತೆ ಪರ್ಜನ್ಯ ಜ‌ಪ ನೆರವೇರಿತು. ಜಪ ಕಾರ್ಯಕ್ರಮದಲ್ಲಿ‌ ಶಾಸಕ ಅಶೋಕ್ ರೈ ಭಾಗವಹಿಸಿ ಮಳೆಗಾಗಿ ದೇವರಲ್ಲಿ‌ ಪ್ರಾರ್ಥನೆ ಮಾಡಿದರು. ಈ‌ ಸಂದರ್ಭದಲ್ಲಿ ಪಂಜಿಗುಡ್ಡೆ ಈಶ್ವರ್ ‌ಭಟ್, ನ್ಯಾಯವಾದಿ ಜಗನ್ನಿವಾಸ್ ರಾವ್ , ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್, ರಂಜಿತ್ ಬಂಗೇರ ಮೊದಲಾದವರು ಉಪಸ್ಥಿತರಿದ್ದರು.

ಮಳೆ ಇಲ್ಲದೆ ಬಿಸಿಲ ತಾಪ‌ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಜನ ಬಿಸಿಲಿಗೆ ಕಂಗೆಟ್ಟಿದ್ದು ಮನೆಯಿಂದ ಹೊರಗೆ ಬರಲಾರದ ಸ್ಥಿತಿ ಇದೆ. ಕ್ಷೇತ್ರದ ಕೆಲವು ಕಡೆಗಳಲ್ಲಿ‌ ಕುಡಿಯುವ ನೀರಿಗೂ ಅಭಾವ ಉಂಟಾಗಿದ್ದು ಮಳೆ ಬಂದು ಜನರ ಸಂಕಷ್ಟ ದೂರವಾಗಲೆಂದು ಪರ್ಜನ್ಯ ಜಪ ನೆರವೇರಿಸಲಾಗಿದೆ. ಮಳೆ ಬಂದು ಎಲ್ಲರಿಗೂ ಸಂತುಷ್ಟಿ ಲಭಿಸಲಿ…
ಅಶೋಕ್ ರೈ, ಶಾಸಕರು ಪುತ್ತೂರು

LEAVE A REPLY

Please enter your comment!
Please enter your name here