ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆದ ಮೊದಲ ಶುಭವಿವಾಹ

0

ಸವಣೂರು: ಕಡಬ ತಾಲೂಕು ಪಾಲ್ತಾಡಿ ಗ್ರಾಮದ ಕಾಯರ್ ಗುರಿ ದಿ.ಗುರುವರವರ ದ್ವಿತೀಯ ಪುತ್ರಿ ಲೀಲಾವತಿ ಮತ್ತು ಪುತ್ತೂರು ತಾಲೂಕು ಕುರಿಯ ಗ್ರಾಮದ ಅಮುಂಜ ದಿ. ಮಹಾಲಿಂಗ ಅವರ ಪುತ್ರ ಎಂ ಲಕ್ಷ್ಮಣ ಇವರ ವಿವಾಹವು ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎ.28ರಂದು ನಡೆಯಿತು.

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮದುವೆ ಸಮಾರಂಭಗಳು ನಡೆಯಬೇಕೆಂದು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಂತೋಷ್ ಕುಮಾರ್ ರೈ ನಳೀಲು ಅವರು ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂಧರ್ಭದಲ್ಲಿ ತಿಳಿಸಿದ್ದರು.

ಅದರಂತೆ ಎ.28ರಂದು ನಳೀಲು ದೇವಸ್ಥಾನದಲ್ಲಿ ಮೊದಲ ಮದುವೆ ಕಾರ್ಯಕ್ರಮ ನಡೆಯಿತು. ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ಹಾಗೂ ಮನೆಯವರು ವಧುವರರಿಗೆ ಶುಭಹಾರೈಸಿದರು.

LEAVE A REPLY

Please enter your comment!
Please enter your name here