ಬೈಕುಗಳ ನಡುವೆ ಅಪಘಾತ – ಸವಾರರಿಗೆ ಗಾಯ

0

ಪುತ್ತೂರು: ಬೈಕುಗಳೆರಡರ ಮಧ್ಯೆ ಅಪಘಾತ ಸಂಭವಿಸಿ ಸವಾರರು ಗಾಯಗೊಂಡಿರುವ ಘಟನೆ ಸಂಬಂಧ ವುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಯಾಳು, ಅರಿಯಡ್ಕ ಗ್ರಾಮದ ಕೌಡಿಚ್ಚಾರ್ ನಿಮಿಷಾಂಬಾ ಮನೆಯ ತಿರುಮೂರ್ತಿ (58ಮ ) ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ.

ಎ.28ರಂದು 07:30 ಗಂಟೆ ಸಮಯಕ್ಕೆ ಬಾಲಕೃಷ್ಣ ಎಂಬವರು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೋಟಾರ್ ಸೈಕಲ್‌ನಲ್ಲಿ ಕಬಕ ಕಡೆಯಿಂದ ಬುಳೇರಿಕಟ್ಟೆ – ಕಡೆಗೆ ಹೋಗಲು ಬಂದು ಪುತ್ತೂರು ಕಸಬಾ ಪರ್ಲಡ್ಕ ಜಂಕ್ಷನ್ ನಲ್ಲಿ ಬೈಕ್ ನಿಲ್ಲಿಸಿ ನಂತರ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಯಾವುದೇ ಸೂಚನೆ ನೀಡದೆ ಒಮ್ಮೆಲೆ ಬಲಬದಿಗೆ ತಿರುಗಿಸಿ ಚಲಾಯಿಸಿದ ಪರಿಣಾಮ, ತಾನು ಕಬಕ ಕಡೆಯಿಂದ ಸಂಪ್ಯ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಮೋಟಾರ್ ಸೈಕಲ್ ಅಪಘಾತವಾಗಿ ತನ್ನ ಎಡ ಕೈಗೆ ಗುದ್ದಿದ ಗಾಯವಾಗಿದ್ದು, ಚಿಕಿತ್ಸೆ ಬಗ್ಗೆ ಪುತ್ತೂರು ಚೇತನಾ ಆಸ್ಪತ್ರೆಗೆ ದಾಖಲಾಗಿದ್ದೇನೆ. ಅಪಘಾತದಿಂದ ಎರಡು ವಾಹನಗಳೂ ಜಖಂಗೊಂಡಿರುತ್ತದೆ ಹಾಗೂ ಆರೋಪಿ ಸವಾರ ಬಾಲಕೃಷ್ಣ ಅವರ ಬಲಕೈಗೆ ತರಚಿದ ಗಾಯವಾಗಿರುತ್ತದೆ ಎಂದು ತಿರುಮೂರ್ತಿ ಅವರು ನೀಡಿದ ದೂರಿನ ಮೇರೆಗೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

LEAVE A REPLY

Please enter your comment!
Please enter your name here