ಕಡಬ: ಜೀವನದಲ್ಲಿ ಜಿಗುಪ್ಸೆ-ಪ್ಲಂಬರ್‌ ರಾಜೇಶ್‌ ಕುಮಾರ್‌ ನೇಣು ಬಿಗಿದು ಆತ್ಮಹತ್ಯೆ

0

ಕಡಬ: ಮೋಟಾರು ಸೈಕಲ್ ಗೆ ಮಾಡಿದ ಸಾಲವನ್ನು ಮರುಪಾವತಿ ಮಾಡಲಾಗದೇ ಜೀವನದಲ್ಲಿ ಜಿಗುಪ್ಸೆಹೊಂದಿ ಕಡಬ ಬೆಳಂದೂರಿನ ಪಟ್ಟೆ ಮನೆ ನಿವಾಸಿ ರಾಜೇಶ್ ಕುಮಾರ್ ಪಿ(37) ಆತ್ಮಹತ್ಯೆಗೆ ಶರಣಾಗಿದ್ದಾರೆ.

ರಾಜೇಶ್‌, ಮನೆಯ ಕೊಟ್ಟಿಗೆಯ ಅಡ್ಡಕ್ಕೆ ನೈಲಾನ್ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ನಿನ್ನೆಯಷ್ಟೇ ಮೃತ ರಾಜೇಶ್ ಕುಮಾರ್ ಕುದ್ಮಾರಿನಲ್ಲಿರುವ ಸಹೋದರಿಯ ಮನೆಗೆ ತೆರಳಿದ್ದು ಸಂಜೆ ವೇಳೆಗೆ ಮನೆಗೆ ವಾಪಾಸಾಗಿದ್ದರು. ಪ್ಲಂಬಿಂಗ್ ಕೆಲಸ ಮಾಡಿಕೊಂಡಿದ್ದ ರಾಜೇಶ್ ಮನೆಯಲ್ಲಿ ಒಬ್ಬರೇ ವಾಸವಿದ್ದರು. ಇಂದು ಬೆಳಿಗ್ಗೆ ಚಿಕ್ಕಪ್ಪನ ಮಗ ಧನಂಜಯ್‌ ರಾಜೇಶ್‌ ಗೆ ಪೋನ್ ಕರೆ ಮಾಡಿದ್ದು ರಾಜೇಶ್‌ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ಬೆಳಕಿಗೆ ಬಂದಿದೆ. ಉಸಿರಾಟದ ತೊಂದರೆ ಹೊಂದಿರುವ ರಾಜೇಶ್‌ ಮೋಟಾರು ಸೈಕಲ್ ಗೆ ಮಾಡಿದ ಸಾಲವನ್ನು ಮರುಪಾವತಿ ಮಾಡಲಾಗದೇ ಜೀವನದಲ್ಲಿ ಜಿಗುಪ್ಸೆಹೊಂದಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here