ಕುಂಬ್ರ: ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿ – ವಾಹನ ಸವಾರರ ಪರದಾಟ

0

ಪುತ್ತೂರು: ಸರಕು ಸಾಗಾಟದ ಲಾರಿಯೊಂದು ರಸ್ತೆ ಮಧ್ಯೆ ಕೆಟ್ಟು ನಿಂತ ಪರಿಣಾಮ ವಾಹನ ಸವಾರರು ಪರದಾಡಬೇಕಾದ ಪರಿಸ್ಥಿತಿ ಕುಂಬ್ರ ಸೇತುವೆ ಬಳಿ ಮೇ.2ರಂದು ಅಪರಾಹ್ನ ನಡೆದಿದೆ.

ಪುತ್ತೂರು ಕಡೆಗೆ ಸರಕು ಸಾಗಾಟ ಮಾಡುತ್ತಿದ್ದ ಲಾರಿಯೊಂದು ಕುಂಬ್ರ ಸೇತುವೆ ಬಳಿಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಸಡನ್ನಾಗಿ ಕೆಟ್ಟು ನಿಂತ ಪರಿಣಾಮ ವಾಹನ ಸವಾರರು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಯಿತು. ನೂತನ ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಲ್ಲಬೇಕಾಯಿತು. ಸ್ಥಳಕ್ಕೆ ಬಂದ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಹಾಗೂ ಸ್ಥಳೀಯರು ಸೇರಿಕೊಂಡು ವಾಹನ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಟ್ಟರು.

LEAVE A REPLY

Please enter your comment!
Please enter your name here