ಕುಕ್ಕೆ ಸುಬ್ರಹ್ಮಣ್ಯದ ಎಇಒ ಯೇಸುರಾಜ್ ಹಿಂದೂ ಧರ್ಮಕ್ಕೆ ಸೇರಿದವರು-ಧಾರ್ಮಿಕ ದತ್ತಿ ಇಲಾಖೆ ಸ್ಪಷ್ಟನೆ

1

ಪುತ್ತೂರು:ರಾಜ್ಯದ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಎಸ್.ಜೆ.ಯೇಸುರಾಜ್ ಅವರು ಹಿಂದೂ ಧರ್ಮಕ್ಕೆ ಸೇರಿದವರು ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.


ಎಸ್.ಜೆ.ಯೇಸುರಾಜ್ ಅವರು ಕುಕ್ಕೆ ಸುಬ್ರಹ್ಮಣ್ಯದ ಎಇಒ ಆಗಿ ಮೇ.1ರಂದು ಅಧಿಕಾರ ವಹಿಸಿಕೊಂಡಿದ್ದಾರೆ.ಯೇಸುರಾಜ್ ಅವರು ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದವರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಪ್ರಚಾರವಾಗುತ್ತಿರುವ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಈ ಸ್ಪಷ್ಟನೆ ನೀಡಿದ್ದಾರೆ.ಎಸ್.ಜೆ.ಯೇಸುರಾಜ್ ಅವರು 2005ರಂದು ಇಲಾಖೆಯಲ್ಲಿ ನೌಕರರಾಗಿ ಆಯ್ಕೆಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದು, ಅವರ ಶಾಲಾ ದಾಖಲಾತಿ ಮತ್ತು ನೇಮಕಾತಿ ಸಂದರ್ಭದಲ್ಲಿ ಹಾಜರುಪಡಿಸಿರುವ ದಾಖಲಾತಿಗಳಂತೆ ಇವರು ಹಿಂದೂ ಧರ್ಮಕ್ಕೆ ಸೇರಿದವರಾಗಿರುತ್ತಾರೆ ಎಂದು ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

1 COMMENT

  1. ಆತ ಮತಾಂತರ ಗೊಂಡ sc ಕ್ರಿಶ್ಚಿಯನ್. ಆತನನ್ನು ಧಾರ್ಮಿಕ ಧತ್ತಿ ಇಲಾಖೆಯಿಂದ ಬದಲಾಯಿಸತಕ್ಕದ್ದು

LEAVE A REPLY

Please enter your comment!
Please enter your name here