ಪದ್ಮರಾಜ್ ಆರ್. ಪೂಜಾರಿ 35ರಿಂದ 40 ಸಾವಿರ ಮತಗಳ ಅಂತರದಿಂದ ಗೆಲುವನ್ನು ಸಾಧಿಸಲಿದ್ದಾರೆ-ಅನಿ ಮಿನೇಜಸ್

0

ರಾಜ್ಯದಲ್ಲಿ ಈಗ ಜನಸಾಮಾನ್ಯರ ಪರವಾದ, ಗ್ಯಾರಂಟಿ ಯೋಜನೆಗಳನ್ನು ಜನರಿಗೆ ನೀಡುತ್ತಿರುವ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವಿದೆ. ಪುತ್ತೂರಿನಲ್ಲಿಯೂ ಅಭಿವೃದ್ಧಿಯ ಚಿಂತನೆಯುಳ್ಳ, ರಾಜಕೀಯವಾಗಿ ಯಾರನ್ನೂ ವಿಂಗಡಿಸದೇ ಎಲ್ಲರನ್ನೂ ಸಮಾನವಾಗಿ ಕಾಣುವ, ಬಡವರ ಬಗ್ಗೆ ಅಪಾರ ಕಾಳಜಿಯುಳ್ಳ ಅಶೋಕ್ ಕುಮಾರ್ ರೈಯವರು ಶಾಸಕರಾಗಿದ್ದಾರೆ. ಆದ್ದರಿಂದ ಮತಯಾಚನೆಗಾಗಿ ಮನೆ-ಮನೆ ಭೇಟಿಯ ಸಂದರ್ಭ ಜನರ ಒಲವು ಕಾಂಗ್ರೆಸ್ ಪಕ್ಷಕ್ಕಿರುವುದು ಕಂಡು ಬಂದಿದೆ. ದ.ಕ. ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಪದ್ಮರಾಜ್ ಆರ್. ಪೂಜಾರಿಯವರು ಕೂಡಾ ಗುರುಬೆಳದಿಂಗಳು ಸಂಘಟನೆಯ ಮೂಲಕ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡಿದವರು. ಹಾಗಾಗಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯು 35ರಿಂದ 40 ಸಾವಿರ ಮತಗಳ ಅಂತರದಿಂದ ಗೆಲುವನ್ನು ಸಾಧಿಸಲಿದ್ದಾರೆ.
ಅನಿ ಮಿನೇಜಸ್
ಅಧ್ಯಕ್ಷರು, 34 ನೆಕ್ಕಿಲಾಡಿ ವಲಯ ಕಾಂಗ್ರೆಸ್

LEAVE A REPLY

Please enter your comment!
Please enter your name here