ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನೆ

0

ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಪುತ್ತೂರು ತಾಲೂಕು ಸಂಘದ ವತಿಯಿಂದ ಸ್ವರ್ಣ ಸಾಧನಾ ಪ್ರಶಸ್ತಿ ಪ್ರದಾನ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಾಗು ಸಂಘ ವಾರ್ಷಿಕ ಮಹಾಸಭೆಯು ಮೇ.4ರಂದು ಪುತ್ತೂರು ಜೈನ ಭವನದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಕ್ಯಾಂಪ್ಕೋದ ನಿವೃತ್ತ ಆಡಳಿತ ನಿರ್ದೇಶಕ ಕೆ.ಪ್ರಮೋದ್ ಕುಮಾರ್ ರೈ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಪಿ.ಐತ್ತಪ್ಪ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಡಾ| ಹೆಚ್.ಜಿ.ಶ್ರೀಧರ್ ಅಭಿನಂದನಾ ಮಾತುಗಳನ್ನಾಡಿದರು.


ಸಾಧನಾ ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ:
ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿ ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಮತ್ತು ಲಕ್ಷ್ಮೀ ದಂಪತಿಗೆ ಸಾಧನಾ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ರೂ.15ಸಾವಿರ ನಗದು, ಫಲಕ, ಸ್ಮರಣಿಕೆ ಫಲಪುಷ್ಪವನ್ನೊಳಗೊಂಡಿತ್ತು. ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿ ಸಾಧನ ಸಲಕರಣೆ ತಯಾರಿಸುವ ಮೂಲಕ ಪ್ರಸಿದ್ಧಿ ಪಡೆದ ಎಸ್.ಆರ್.ಕೆ.ಲ್ಯಾಡರ‍್ಸ್‌ನ ಮಾಲಕ ಕೇಶವ ಅಮೈ, ಗಣರಾಜ್ಯೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರತಿನಿಧಿಸಿದ ದರ್ಬೆ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವಿದ್ವಾನ್ ದೀಪಕ್ ಕುಮಾರ್ ಅವರ ಶಿಷ್ಯೆಯರಾದ ಶ್ರೀಮತಿ ಸ್ವಾತಿ ಎನ್ ವಿ, ಕು.ಶಮಾ ಚಂದುಕೂಡ್ಲು, ಕು ಪ್ರಣಮ್ಯ, ದಕ್ಷಿಣ ಆಫ್ರಿಕಾದ ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳದಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಪದಕ ವಿಜೇತರಾದ ವಿವೇಕಾನಂದ ಸಿಬಿಎಸ್‌ಇ ಶಾಲೆಯ ಕು.ಆಪ್ತ ಚಂದ್ರಮತಿ ಮುಳಿಯ, ಎನ್ ಸಿ ಸಿ ಮೂಲಕ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಭಾಗವಹಿಸಿದ ಕರ್ನಾಟಕದ ಏಕೈಕ ಪ್ರತಿನಿಧಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಕು.ತೇಜಸ್ವಿನಿ ವಿ ಶೆಟ್ಟಿ,. ಅವರನ್ನು ಗೌರವಿಸಲಾಯಿತು. ಸಂಘದ ಸದಸ್ಯ ನಾಗಪ್ಪ ಗೌಡ ಬೊಮ್ಮೆಟ್ಟಿ, ಕೋಶಾಧಿಕಾರಿ ಶಾಂತಿ ಟಿ ಹೆಗಡೆ, ಯಶೋಧಾ, ನಿವೃತ್ತ ಶಿಕ್ಷಕಿ ಸುಶೀಲ, ಲೀನಾ ಪುಡ್ತಾದೊ, ಶಶಿಕಲಾ ಅವರು ಸನ್ಮಾನಿತರನ್ನು ಪರಿಚಯಿಸಿದರು. ಸಂಘದ ಸದಸ್ಯರಾದ ಸುಂದರ್ ನಾಯ್ಕ್ ಅತಿಥಿಗಳನ್ನು ಪರಿಚಯಿಸಿದರು.


ಸಂಘದ ಹಿರಿಯ ಸದಸ್ಯರಿಗೆ ಗೌರವ:
ಸಂಘದಲ್ಲಿ ಈಗಾಗಲೇ 1ಸಾವಿರ ಸದಸ್ಯರಿದ್ದು, ಈ ಪೈಕಿ ಸಂಘದ ಸದಸ್ಯರಾಗಿ 75, 80 ಮತ್ತು 85 ವರ್ಷ ಪ್ರಾಯ ಪೂರ್ಣಗೊಂಡ 48 ಮಂದಿ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕಾರಿ ಸಮಿತಿ ಸದಸ್ಯ ಸೂರಪ್ಪ ಗೌಡ, ಶಶಿಕಲಾ ಅವರು ಗೌರವ ಕಾರ್ಯಕ್ರಮ ನಿರ್ವಹಿಸಿದರು.


ನಿಧನರಾದ ಸದಸ್ಯರಿಗೆ ಶ್ರದ್ಧಾಂಜಲಿ:
ಸಂಘದ ಸದಸ್ಯರಾಗಿದ್ದವರಲ್ಲಿ ನಿಧನರಾದ ಜತ್ತಪ್ಪ, ಸೆಲಿನ್ ಪಿಂಟೊ, ಗಣೇಶ್ ಭಂಡಾರಿ, ಹುಕ್ರಪ್ಪ ಗೌಡ, ನರಸಿಂಹ, ಸಿಸಿಲ್ಯಾ ಡಯಾಸ್, ಭವಾನಿ ಶಂಕರಿ, ಜನಾರ್ದನ, ವಿಷ್ಣು ಭಟ್, ವಿಶ್ವನಾಥ ಶೆಟ್ಟಿ, ಕೇಶವಪೂಜಾರಿ, ಪಿ ಶ್ಯಾಮ್ ಭಟ್, ರಾಜಗೋಪಾಲ, ಜನಾರ್ದನ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ನಿವೃತ್ತ ಪ್ರಾಂಶುಪಾಲ ರಾಧಾಕೃಷ್ಣ ಭಟ್ ಶ್ರದ್ಧಾಂಜಲಿ ಕಾರ್ಯಕ್ರಮ ನಿರ್ವಹಿಸಿದರು. ಕಾಂಚನ ಸುಂದರ ಭಟ್, ಕಾರ್ಯದರ್ಶಿ ತಿರುಮಲೇಶ್ವರ ಭಟ್, ಸಂಘಟನಾ ಕಾರ್ಯದರ್ಶಿ ಜಗನ್ನಾಥ ರೈ, ಉಪಾಧ್ಯಕ್ಷ ರಾಮದಾಸ್ ಗೌಡ, ಕೋಶಾಧಿಕಾರಿ ಶಾಂತಿ ಟಿ ಹೆಗಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷೆ ಪ್ರೊ. ವತ್ಸಲಾ ರಾಜ್ಞಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here