ನಾಳೆ(ಮೇ.5) ಕಾರ್ಪಾಡಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ಧನ್ಯೋತ್ಸವ’

0

ಪುತ್ತೂರು: ಸಂಪೂರ್ಣವಾಗಿ ಜೀರ್ಣೋದ್ಧಾರಗೊಂಡು ಅದ್ಧೂರಿಯಾಗಿ ಬ್ರಹ್ಮಕಲಶೋತ್ಸವಗಳು ನಡೆದ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಹಕರಿಸಿದ ಕರಸೇವಕರಿಗೆ, ಗ್ರಾಮಸ್ಥರಿಗೆ ಹಾಗೂ ಭಕ್ತಾದಿಗಳಿಗೆ ಕೃತಜ್ಞತೆ ಸಲ್ಲಿಸುವ ‘ಧನ್ಯೋತ್ಸವ’ ಸಭೆಯು ಮೇ.5ರಂದು ಸಂಜೆ 5 ಗಂಟೆಗೆ ದೇವಸ್ಥಾನದಲ್ಲಿ ನಡೆಯಲಿದೆ.


ದೇವಸ್ಥಾನ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವಗಳನ್ನು ನಡೆಸುವ ನಮ್ಮೆಲ್ಲರ ಕನಸನ್ನು ಒಂದು ವರ್ಷದಲ್ಲಿ ಎಲ್ಲಾ ಕಾರ್ಯಕರ್ತರಿಗೆ, ಗ್ರಾಮಸ್ಥರಿಗೆ ಧನ್ಯೋತ್ಸವ ಏರ್ಪಡಿಸಲಾಗಿದ್ದು ಕರಸೇವಕರು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here