ಪದ್ಮರಾಜ್ ಆರ್ ಪೂಜಾರಿ 50 ಸಾವಿರ ಮತಗಳಿಂದ ಗೆದ್ದೇ ಗೆಲ್ಲುತ್ತಾರೆ – ಗಂಗಾಧರ ಶೆಟ್ಟಿ ಅಮೆತ್ತಿಮಾರುಗುತ್ತು

0

ದ.ಕ.ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ಪದ್ಮರಾಜ್ ಆರ್ ಪೂಜಾರಿ ಅವರು ಬಹುಮತದಲ್ಲಿ ಗೆಲ್ಲುವಲ್ಲಿ ಯಾವುದೇ ಸಂಶಯವಿಲ್ಲ. ರಾಜ್ಯ ಸರ್ಕಾರ ಕೊಟ್ಟಿರುವ ಗ್ಯಾರಂಟಿ ಯೋಜನೆಗಳು ಸಾಮಾನ್ಯ ವರ್ಗದವರ ಮತ್ತು ಕೃಷಿ ಕೂಲಿ ಕಾರ್ಮಿಕರ, ಮಹಿಳೆಯರ ಮನಸ್ಸು ಗೆದ್ದಿದೆ. ಈ ಯೋಜನೆಗಳು ಕಾಂಗ್ರೆಸ್ ಕಾರ್ಯಕರ್ತರ ಅವಿರತ ಶ್ರಮದ ದುಡಿಮೆಯಿಂದಾಗಿ ಪ್ರತಿ ಮನೆ ಮನೆಗೂ ತಲುಪಿದೆ. ವಿಶೇಷವಾಗಿ ಮಹಿಳೆಯರ ಸ್ವಾವಲಂಬನೆಯ ಬದುಕಿಗೆ ಈ ಯೋಜನೆಗಳು ಆಧಾರ ಸ್ತಂಭವಾಗಿದೆ. ಇದು ಮತವಾಗಿ ಕಾಂಗ್ರೆಸ್‌ಗೆ ಅನುಕೂಲವಾಗಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾರಣವಾಗುತ್ತದೆ ಎನ್ನುವುದರಲ್ಲಿ ಅನುಮಾನವಿಲ್ಲ. ಕೇಂದ್ರ ಸರಕಾರದ ಬೆಲೆ ಏರಿಕೆ, ನಿರುದ್ಯೋಗ, ತೈಲ ಬೆಲೆ ಏರಿಕೆ ಈ ಚುನಾವಣೆಯಲ್ಲಿ ವಿಶೇಷ ಪ್ರಭಾವವನ್ನು ಬೀರುತ್ತದೆ. ಇಂಡಿಯಾ ಒಕ್ಕೂಟ ಕೇಂದ್ರದಲ್ಲಿ ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತದೆ. ಪದ್ಮರಾಜ್ ಆರ್ ಪೂಜಾರಿಯವರ ಸರಳ, ನಿಷ್ಕಳಂಕ ವ್ಯಕ್ತಿತ್ವ. ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಚಿಂತನೆ ಇದೆಲ್ಲವೂ ಅವರಿಗೆ ಪಕ್ಷಾತೀತವಾಗಿ ಅಭಿಮಾನಿ ವಲಯವನ್ನು ಸೃಷ್ಟಿಸಿದೆ. ಅವರು 50,000 ಮತಗಳ ಅಂತರದಿಂದ ಗೆದ್ದೇ ಗೆಲ್ಲುತ್ತಾರೆ.

ಗಂಗಾಧರ ಶೆಟ್ಟಿ ಅಮೆತ್ತಿಮಾರುಗುತ್ತು
ಅಧ್ಯಕ್ಷರು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ
ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿ

LEAVE A REPLY

Please enter your comment!
Please enter your name here