ನೆಲ್ಯಾಡಿ-ಕೋಲ್ಪೆ ಮಖಾಂ ಉರೂಸ್, ಧ್ವಜಾರೋಹಣ

0

ನೆಲ್ಯಾಡಿ: ಬದ್ರಿಯಾ ಜುಮಾ ಮಸೀದಿ ಹಾಗೂ ಸಯ್ಯದ್ ಮಲ್ಹರ್ ವಲಿಯಲ್ಲಾಹಿ ದರ್ಗಾ ಶರೀಫ್ ಕೋಲ್ಪೆ-ನೆಲ್ಯಾಡಿ ಇದರ ಆಶ್ರಯದಲ್ಲಿ ನಡೆಯುವ ಕೋಲ್ಪೆ ಮಖಾಂ ಉರೂಸ್‌ನ ಧ್ವಜಾರೋಹಣ ಮೇ.5ರಂದು ಬೆಳಿಗ್ಗೆ ನಡೆಯಿತು.


ಕೋಲ್ಪೆ ಬಿಜೆಎಂನ ಖತೀಬರಾದ ಇಸ್ಹಾಕ್ ಫೈಝಿ ಕುಕ್ಕಿಲ ಅವರು ಧ್ವಜಾರೋಹಣ ನೆರವೇರಿಸಿ ಪ್ರಾರ್ಥನೆ ನೆರವೇರಿಸಿದರು. ಕೋಲ್ಪೆ ಬಿಜೆಎಂ ಅಧ್ಯಕ್ಷರಾದ ಕೆ.ಕೆ.ಅಬೂಬಕ್ಕರ್, ಎಸ್‌ಕೆಎಸ್‌ಎಸ್‌ಎಫ್ ದಕ್ಷಿಣ ಕನ್ನಡ ಈಸ್ಟ್ ಇದರ ಪ್ರಧಾನ ಕಾರ್ಯದರ್ಶಿ ಹಾರಿಸ್ ಕೌಸರಿ, ಕೋಲ್ಪೆ ಬಿಜೆಎಂ ಗೌರವಾಧ್ಯಕ್ಷ ಸಯ್ಯದ್ ಬಿ.ಎಸ್.ಬಾವಾ ತಂಙಳ್ ಕೋಲ್ಪೆ, ಪ್ರಧಾನ ಕಾರ್ಯದರ್ಶಿ ಯು.ಕೆ.ಉಮ್ಮರ್, ಉಪಾಧ್ಯಕ್ಷರಾದ ಇಕ್ಬಾಲ್ ಹೆಚ್., ಅಬ್ದುಲ್ಲಾ ಕುಂಞಿ ಕೊಂಕೋಡಿ, ಕೋಲ್ಪೆ ಖಲಂದರ್ ಷಾ ದಫ್ ಸಮಿತಿ ಅಧ್ಯಕ್ಷ ಇಕ್ಬಾಲ್ ಕೆ., ಕೆ.ಕೆ.ಇಸ್ಮಾಯಿಲ್ ಕೋಲ್ಪೆ, ಮಜೀದ್ ಫೈಝಿ ಸೇರಿದಂತೆ ಕೋಲ್ಪೆ ಬಿಜೆಎಂ ಆಡಳಿತ ಸಮಿತಿ ಪದಾಧಿಕಾರಿಗಳು, ಸದಸ್ಯರು, ಕೋಲ್ಪೆ ಖಲಂದರ್ ಷಾ ದಫ್ ಸಮಿತಿ ಪದಾಧಿಕಾರಿಗಳು, ಸದಸ್ಯರು, ಗೋಳಿತ್ತೊಟ್ಟು ರಹ್ಮಾನಿಯಾ ಜಮೀಲ ಜುಮಾಮಸೀದಿ ಪದಾಧಿಕಾರಿಗಳು, ಸದಸ್ಯರು, ಕೋಲ್ಪೆ ಎಸ್‌ಕೆಎಸ್‌ಎಸ್‌ಎಫ್ ಅಧ್ಯಕ್ಷರು, ಸದಸ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here