ಬಂಬಿಲ-ನಾಡೋಳಿ ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

0

ಸವಣೂರು : ಪಾಲ್ತಾಡಿ ಗ್ರಾಮದ ಬಂಬಿಲ ನಾಡೋಳಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಸೇತುವೆಯ ಕಾಮಗಾರಿಯನ್ನು ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ವೀಕ್ಷಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ,ಈ ಭಾಗದ ಬೇಡಿಕೆಯಂತೆ ನೂತನ ಸೇತುವೆ ನಿರ್ಮಾಣ ಹಾಗೂ ಸಂಪರ್ಕ ರಸ್ತೆಗೆ ಅನುದಾನ ನೀಡಿದ್ದು ಕಾಮಗಾರಿ ಬಹುತೇಕವಾಗಿ ಪೂರ್ಣವಾಗಿದೆ ಎಂದರು.

ಈ ಸಂದರ್ಭದಲ್ಲಿ ಸವಣೂರು ಗ್ರಾ.ಪಂ.ಉಪಾಧ್ಯಕ್ಷೆ ಜಯಶ್ರೀ ವಿಜಯ ,ಸದಸ್ಯರಾದ ಸತೀಶ್ ಅಂಗಡಿಮೂಲೆ, ತಾರಾನಾಥ ಬೊಳಿಯಾಲ, ವಿನೋದಾ ರೈ ಚೆನ್ನಾವರ, ಹರಿಕಲಾ ರೈ ಕುಂಜಾಡಿ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ,ಪ್ರಧಾನ ಕಾರ್ಯದರ್ಶಿ ಪ್ರದೀಪ್ ರೈ ಮನವಳಿಕೆ,ಸುಳ್ಯ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಇಂದಿರಾ ಬಿ.ಕೆ.,ಸುಳ್ಯ ಮಂಡಲ ಎಸ್.ಟಿ.ಮೋರ್ಚಾ ಅಧ್ಯಕ್ಷ ಗಂಗಾಧರ ಪೆರಿಯಡ್ಕ, ಪ್ರಮುಖರಾದ ಗಣೇಶ್ ಶೆಟ್ಟಿ ಕುಂಜಾಡಿ, ಬೂತ್ 70ರ ಅಧ್ಯಕ್ಷ ಅನ್ನಪೂರ್ಣ ಪ್ರಸಾದ್ ರೈ ಬೈಲಾಡಿ, ಕಾರ್ಯದರ್ಶಿ ಹೊನ್ನಪ್ಪ ಗೌಡ ಜಾರಿಗೆತ್ತಡಿ,ಬಿಜೆಪಿ ಪಾಲ್ತಾಡಿ ಶಕ್ತಿ ಕೇಂದ್ರ ಪ್ರಮುಖ್ ಮಹೇಶ್ ಕೆ.ಸವಣೂರು ,ಸವಣೂರು ಶಕ್ತಿ ಕೇಂದ್ರ ಪ್ರಮುಖ್ ಚೇತನ್ ಕೋಡಿಬೈಲು ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here