ಅಡ್ಯನಡ್ಕದ ದಂಪತಿಗಳಿದ್ದ ಕಾರು ಸಂಪಾಜೆಯಲ್ಲಿ ಹೋಟೆಲ್‌ ಗೋಡೆಗೆ ಡಿಕ್ಕಿಯಾದ ಪ್ರಕರಣ – ಚಿಕಿತ್ಸೆಯಲ್ಲಿದ್ದ ಪತ್ನಿ ಆಸ್ಪತ್ರೆಯಲ್ಲಿ ಮೃತ್ಯು

0

ವಿಟ್ಲ: ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸಂಪಾಜೆ ಬಳಿ ರಸ್ತೆ ಬದಿಯ ಹೋಟೆಲಿನ ಗೋಡೆಗೆ ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಿನಲ್ಲಿದ್ದ ದಂಪತಿಗಳ ಪೈಕಿ ಪತ್ನಿ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಮೇ.3ರಂದು ಸಂಭವಿಸಿದೆ

ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಅಡ್ಯನಡ್ಕದ ಅರವಿಂದ ಪೈ ಮತ್ತು ಅವರ ಪತ್ನಿ ಅನುರಾಧ ಪೈ ರವರು ಮುಂಜಾನೆ ವೇಳೆ ಅಡ್ಯನಡ್ಕದಿಂದ ತಮ್ಮ ಕಾರಿನಲ್ಲಿ ಮಡಿಕೇರಿ ಕಡೆಗೆ ತೆರಳುತ್ತಿದ್ದರು. ಕಾರು ಸಂಪಾಜೆಯ ಹೈವೆ ಹೋಟೆಲ್ ಬಳಿ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಹೋಟೆಲಿನ ಮುಂಭಾಗದ ಗೋಡೆಗೆ ಡಿಕ್ಕಿಹೊಡೆದಿದ್ದು,ಕಾರು ಚಾಲಕ ಅರವಿಂದ ಪೈ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮುಂಭಾಗದಲ್ಲಿ ಕುಳಿತಿದ್ದ ಅವರ ಪತ್ನಿ ಅನುರಾಧ ಪೈ ಅವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯರು. ಸೇರಿ ಅಂಬ್ಯುಲೆನ್ಸ್ ಮೂಲಕ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ನೀಡಲಾಯಿತು. ಆದರೆ ತಲೆಗೆ ಗಂಭೀರವಾಗಿ ಗಾಯಗೊಂಡ ಅನುರಾಧ ಪೈ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here