ಸಂಪ್ಯದಲ್ಲಿ ರಿಕ್ಷಾ ಡಿಕ್ಕಿ – ಚಿಕಿತ್ಸೆ ಫಲಕಾರಿಯಾಗದೆ ನಿವೃತ ಶಿಕ್ಷಕ ಸೂರ್ಯನಾರಾಯಣ ಕಾರಂತ ಮೃತ್ಯು

0

ಪುತ್ತೂರು: ನಿವೃತ್ತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80ವ) ನಿಧನರಾಗಿದ್ದಾರೆ.ಇಂದು ಬೆಳಿಗ್ಗೆ ಸಂಪ್ಯದಲ್ಲಿ‌ ರಸ್ತೆ ದಾಟುತ್ತಿದ್ದ ವೇಳೆ ಪುತ್ತೂರು ಸರಕಾರಿ ಆಸ್ಪತ್ರಗೆ ರೋಗಿಯೊಬ್ಬರನ್ನು ಕರೆದುಕೊಂಡು ಬರುತ್ತಿದ್ದ ರಿಕ್ಷಾವೊಂದು ಸೂರ್ಯನಾರಾಯಣ ಕಾರಂತ ಅವರಿಗೆ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಸೂರ್ಯನಾರಾಯಣ ಅವರು ರಸ್ತೆ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ತಕ್ಷಣ ಅವರನ್ನು ಬೇರೊಂದು ರಿಕ್ಷಾದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ತೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೂರ್ಯನಾರಾಯಣ ಕಾರಂತ ಸಾವನ್ನಪ್ಪಿದ್ದಾರೆ

ಗಣಿತ ಶಿಕ್ಷಕರಾಗಿದ್ದ ಸೂರ್ಯನಾರಾಯಣ ಕಾರಂತ ಕಳೆದ 30 ವರ್ಷಗಳಲ್ಲಿ ಪುತ್ತೂರು ದೇವಸ್ಥಾನದ ಬಳಿಯ ಶಾಲೆ, ಆರ್ಯಾಪು, ಇರ್ದೆ, ಕುಂಬ್ರ ಮೊದಲಾದ ಕಡೆ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರಾಗಿ ಮತ್ತು ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here