ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಧನಸಹಾಯ

0

ಪುತ್ತೂರು: ಪುತ್ತೂರು ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಪರ್ಪುಂಜ ಘಟಕದ ಹಸೇನರ್ ಎಂಬುವರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದು ಇವರಿಗೆ ಸಂಘದ ವತಿಯಿಂದ ಧನ ಸಹಾಯವನ್ನು ನೀಡಲಾಯಿತು. ಸಂಘದ ಗೌರಾಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಅಧ್ಯಕ್ಷ ಇಸ್ಮಾಯಿಲ್ ಬೊಳುವಾರು, ಉಪಾಧ್ಯಕ್ಷ ತಾರಾನಾಥ ಗೌಡ ಬನ್ನೂರು, ಪ್ರಧಾನ ಕಾರ್ಯದರ್ಶಿ ಶಶಿಧರ್ ಸಿಟಿಗುಡ್ಡೆ, ಜೊತೆ ಕಾರ್ಯದರ್ಶಿ ಹರೀಶ್ ತೆಂಕಿಲ, ಸಂಘಟನಾ ಕಾರ್ಯದರ್ಶಿ ಶರತ್ ರೈ, ಪರ್ಪುಂಜ ಘಟಕದ ಅಧ್ಯಕ್ಷ ರಾಜೇಶ್, ಕಾರ್ಯದರ್ಶಿ ಮಹಮ್ಮದ್ ಮತ್ತು ಸಂಘದ, ಘಟಕದ ಸದಸ್ಯರು ಉಪಸ್ಥಿತರಿದ್ದರು. ಸಿಲ್ವೆಸ್ಟಾರ್ ಡಿಸೋಜ ಸಹಕರಿಸಿದರು.

LEAVE A REPLY

Please enter your comment!
Please enter your name here