ನೆಕ್ಕಿಲಾಡಿ ಆದರ್ಶ ನಗರದ ತಿರುವು ರಸ್ತೆಯನ್ನು ಸುಗಮ ಸಂಚಾರಕ್ಕೆ ಯೋಗ್ಯವಾದ ರೀತಿಯಲ್ಲಿ ನಿರ್ಮಿಸಿ-ಗುತ್ತಿಗೆದಾರರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಮನವಿ

0

ಪುತ್ತೂರು: ಪುತ್ತೂರು-ಉಪ್ಪಿನಂಗಡಿ ಗುರುವಾಯನಕೆರೆ ರಾಜ್ಯ ಹೆದ್ದಾರಿಯ ಕಾಮಗಾರಿಯ ಪ್ರಗತಿಯಲ್ಲಿದ್ದು ವಾಹನ ಸಂಚಾರದ ಸುರಕ್ಷತೆಯ ದೃಷ್ಟಿಯಿಂದ ಮಾಜಿ ಶಾಸಕ ಸಂಜೀವ ಮಠಂದೂರು ಸ್ಥಳೀಯರ ಬೇಡಿಕೆ ಮೇರೆಗೆ ನೆಕ್ಕಿಲಾಡಿ ಆದರ್ಶ ನಗರದ ತಿರುವು ರಸ್ತೆಯನ್ನು ಸುಗಮ ಸಂಚಾರಕ್ಕೆ ಯೋಗ್ಯವಾದ ರೀತಿಯಲ್ಲಿ ನಿರ್ಮಿಸುವಂತೆ ಮಂಜುಶ್ರೀ ಕನ್ಸ್ಟ್ರಕ್ಷನ್ ನ ದಯಾನಂದ ಶೆಟ್ಟಿ ಅವರಿಗೆ ಸೂಚಿಸಿದ್ದಾರೆ.


ಈ ವೇಳೆ ನೆಕ್ಕಿಲಾಡಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸದಾನಂದ, ಮಾಜಿ ಪಂಚಾಯತ್ ಅಧ್ಯಕ್ಷ ಪ್ರಶಾಂತ್ ಎನ್, ಸೇವಾ ಸಹಕಾರಿ ನಿರ್ದೇಶಕ ರಾಜೇಶ್ ಮುಕ್ಕಾರಿ, ರಮೇಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here