ಮಿತ್ತೂರು: ಆಟೋ ರಿಕ್ಷಾ ಪಲ್ಟಿ-ಚಾಲಕನಿಗೆ ಗಾಯ – ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಅಶ್ರಫ್

0

ಪುತ್ತೂರು: ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಗಾಯಗೊಂಡ ಘಟನೆ ಮೇ.10ರಂದು ಮಧ್ಯಾಹ್ನ ಮಿತ್ತೂರು ರೈಲ್ವೇ ಓವರ್ ಬ್ರಿಡ್ಜ್ ಸಮೀಪ ನಡೆದಿದೆ. ಆಟೋ ಚಾಲಕ, ಮಿತ್ತಪಡ್ಪು ಪಾಟ್ರಕೋಡಿ ನಿವಾಸಿ ನೀಲಪ್ಪ ಮೂಲ್ಯ(50.ವ) ಗಾಯಗೊಂಡವರು. ರಿಕ್ಷಾದಲ್ಲಿದ್ದ ಇಬ್ಬರು ಸವಾರರು ಪಾರಾಗಿದ್ದಾರೆ.

ಕೆಎ 19 ಎಬಿ 3693 ನಂಬರಿನ ರಿಕ್ಷಾ ಪುತ್ತೂರಿನಿಂದ ಮಿತ್ತೂರು ಕಡೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಅಪಘಾತ ಸಂಭವಿಸಿದ ವೇಳೆ ಅದೇ ಮಾರ್ಗವಾಗಿ ರಿಡ್ಜ್ ಕಾರಿನಲ್ಲಿ ತೆರಳುತ್ತಿದ್ದ ಭಾರತ್ ವೆಹಿಕಲ್ ಬಜಾರ್‌ನ ಮಾಲಕ ಅಶ್ರಫ್ ಪುತ್ತೂರು ಹಾಗೂ ಅವರ ಜೊತೆಗಿದ್ದ ಆಸಿಫ್ ಕಲ್ಲಡ್ಕ ತಕ್ಷಣ ಗಾಯಾಳುವನ್ನು ಉಪಚರಿಸಿ, ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿದರು. ಅಶ್ರಫ್ ಅವರ ಸಾಮಾಜಿಕ ಕಳಕಳಿಯ ಕಾರ್ಯಕ್ಕೆ ಕೆಎಂಸಿ ಆಸ್ಪತ್ರೆ ಅಭಿನಂದನಾ ಪ್ರಮಾಣಪತ್ರ ನೀಡಿ ಗೌರವಿಸಿದೆ. ಗಾಯಾಳುವನ್ನು ಕೂಡಲೇ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ ಅಶ್ರಫ್ ಅವರ ಮಾನವೀಯತೆ ಪ್ರಶಂಸೆಗೆ ಪಾತ್ರವಾಗಿದೆ.

LEAVE A REPLY

Please enter your comment!
Please enter your name here