ದ.ಕ ಸಹಕಾರಿ ಕೃಷಿ ಅಭಿವೃದ್ಧಿ ಸಂಘ(ನಿ) ನಾಮನಿರ್ದೇಶಕರಾಗಿ ಶಶಿಕುಮಾರ್‌ ರೈ ಬಾಲ್ಯೋಟ್ಟು ನೇಮಕ

0

ಪುತ್ತೂರು: ಮಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿಯಮಿತ ಇದರ ಆಡಳಿತ ಮಂಡಳಿ ನಿರ್ದೇಶಕರಾಗಿರುವ ಶಶಿಕುಮಾರ್‌ ರೈ ಬಾಲ್ಯೋಟ್ಟು ಅವರನ್ನು ದ.ಕ ಸಹಕಾರಿ ಕೃಷಿ ಅಭಿವೃದ್ಧಿ ಸಂಘ ನಿಯಮಿತ ಮಂಗಳೂರು ಇದರ ಆಡಳಿತ ಮಂಡಳಿಗೆ ನಾಮನಿರ್ದೇಶಕ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಎಸ್‌ಸಿಡಿಸಿಸಿ ಬ್ಯಾಂಕ್‌ ವತಿಯಿಂದ ದ.ಕ ಸಹಕಾರಿ ಕೃಷಿ ಅಭಿವೃದ್ಧಿ ಸಂಘ(ನಿ)ಕ್ಕೆ 2019 ಮೇ.20ರಂದು ನಾಮನಿರ್ದೇಶನಗೊಂಡಿದ್ದ ವಿನಯ್‌ ಕುಮಾರ್‌ ಸೂರಿಂಜೆ ಅವರ ಸ್ಥಾನಕ್ಕೆ ಶಶಿಕುಮಾರ್‌ ರೈ ಬಾಲ್ಯೋಟ್ಟು ಅವರನ್ನು ಆಯ್ಕೆ ಮಾಡಲಾಗಿದೆ. 25/03/2024ರಂದು ನಡೆದ ಬ್ಯಾಂಕಿನ ಆಡಳಿತ ಮಂಡಳಿಯ ಸಭೆಯ ನಿರ್ಣಯದಂತೆ ಈ ನೇಮಕ ಮಾಡಲಾಗಿದೆ ಎಂದು ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ(ಪ್ರಭಾರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here