ಮೇ.12: ನಿವೃತ್ತ ಶಿಕ್ಷಕ ಕೇನ್ಯ ರಘುನಾಥ ರೈ-ಹರಿಣಾಕ್ಷಿ ಆರ್.ರೈ ದಂಪತಿ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

0

ಉಪ್ಪಿನಂಗಡಿ: ಕೊಯಿಲ ಗ್ರಾಮದ ಆರುವಾರ ನಿವಾಸಿ, ನಿವೃತ್ತ ಶಿಕ್ಷಕ ಕೇನ್ಯ ರಘುನಾಥ ರೈ ಮತ್ತು ಹರಿಣಾಕ್ಷಿ ಆರ್.ರೈ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಕಾರ್ಯಕ್ರಮ ಮೇ.12ರಂದು ಸಂಜೆ ಉಪ್ಪಿನಂಗಡಿ ಹೆಚ್.ಯಮ್.ಆಡಿಟೋರಿಯಂನಲ್ಲಿ ನಡೆಯಲಿದೆ.


ಸಂಜೆ 6 ಗಂಟೆಯಿಂದ ಜಗದೀಶ್ ಆಚಾರ್ಯ ಪುತ್ತೂರು ಇವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6.30ರಿಂದ ಶುಭಾಶಂಸನಾ ಕಾರ್ಯಕ್ರಮ ನಡೆಯಲಿದ್ದು ಕಾರ್ಕಳ ಅಜೆಕಾರು ಪದ್ಮಗೋಪಾಲ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ. ನಿವೃತ್ತ ಪ್ರಾಂಶುಪಾಲ ಎ.ಕೃಷ್ಣಪ್ಪ ಪೂಜಾರಿ ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಸವಣೂರು ವಿದ್ಯಾರಶ್ಮಿ ಸಮೂಹಕ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದ ಬಳಿಕ ಸಹಭೋಜನ ನಡೆಯಲಿದೆ ಎಂದು ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here