ಕುಂಬ್ರ ಜಗನ್ನಾಥ ರೈ ಹೊಸಮನೆ ನಿಧನ

0

ಪುತ್ತೂರು: ಒಳಮೊಗ್ರು ಗ್ರಾಮದ ಹೊಸಮನೆ ನಿವಾಸಿ ಜಗನ್ನಾಥ ರೈ ಯವರು ಮೇ.12 ರಂದು ಮುಂಜಾನೆ ಸ್ವಗೃಹದಲ್ಲಿ ನಿಧನರಾದರು. ಸರಕಾರಿ ಉನ್ನತ ಪ್ರಾಥಮಿಕ ಶಾಲೆ ಏಕತ್ತಡ್ಕ ಅಜ್ಜಿಕಲ್ಲು ಇದರ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ, ಮೈತ್ರಿ ಯುವಕ ಮಂಡಲದ ಗೌರವಾಧ್ಯಕ್ಷರಾಗಿ, ಸಾಮಾಜಿಕ ಧಾರ್ಮಿಕ ರಾಜಕೀಯ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಜಗ್ಗಣ್ಣ ಎಂದೇ ಪ್ರಸಿದ್ದಿಯಾಗಿದ್ದರು. ಮೃತರು ಪತ್ನಿ ಜಯಂತಿ, ಪುತ್ರ ಪುತ್ತೂರಿನ ವಕೀಲ ಆದರ್ಶ್ ರೈ ಹೆಚ್, ಪುತ್ರಿ ರಶ್ಮಿ ರೈ, ಅಳಿಯ, ಸೊಸೆ, ಮೊಮ್ಮಕ್ಕಳು ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here