ಪುತ್ತೂರು: ಭಾರೀ ಗಾಳಿ ಮಳೆಗೆ ಉರ್ಲಾಂಡಿ, ಸಿಂಗಾಣಿಯಲ್ಲಿ ಮನೆಗಳಿಗೆ ಹಾನಿ, ಶಾಸಕರ ಭೇಟಿ

0

ಪುತ್ತೂರು: ಮೇ.12ರಂದು ಸಂಜೆ ಪುತ್ತೂರು ಆಸುಪಾಸಿನಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಬಪ್ಪಳಿಗೆಯ ಸಿಂಗಾಣಿ ಹಾಗೂ ಉರ್ಲಾಂಡಿಯಲ್ಲಿ ಮನೆಗೆ ಹಾನಿಯಾಗಿದೆ.
ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ ಶೀಟು ಗಾಳಿಗೆ ಹಾರಿ ಹೋಗಿದ್ದು, ಉರ್ಲಾಂಡಿಯ ಶೋಭಾ ಹೆಗ್ಡೆ ಎಂಬವರ ಮನೆಯ ಮೇಲೆ ಮರ ಬಿದ್ದು ಭಾಗಶ: ಜಖಂಗೊಂಡಿದೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ.
ಅಶೋಕ್‌ಕುಮಾರ್ ರೈ ಭೇಟಿ: ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಅಶೋಕ್ ಕುಮಾರ್ ರೈ ಸಿಂಗಾಣಿಯ ಕಮಲರವರ ಮನೆಗೆ ತಾತ್ಕಾಲಿಕವಾಗಿ ಟರ್ಪಾಲ್ ಹಾಕಿಸಿದ್ದಾರೆ. ಉರ್ಲಾಂಡಿಗೆ ಭೇಟಿ ನೀಡಿ ಮನೆ ಮೇಲೆ ಬಿದ್ದಿರುವ ಮರವನ್ನು ತಕ್ಷಣ ತೆರವು ಮಾಡುವಂತೆ ಸೂಚನೆಯನ್ನು ನೀಡಿದ್ದಾರೆ. ತಾತ್ಕಾಲಿಕವಾಗಿ ಎರಡೂ ಮನೆಗೂ ನೆರವಿನ ಭರವಸೆಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತ ದಿನೇಶ್ ಪಿ.ವಿ., ಮೋನು ಬಪ್ಪಳಿಗೆ, ಇಸ್ಮಾಯಿಲ್ ಬೊಳುವಾರು, ವಿಲ್ಪಿ, ಕೇಶವ ಉಲಾಂಡಿ, ಕುಮಾರ್ ಉರ್ಲಾಂಡಿ, ಸೂರ್ಯ, ವಿಡ್ ಫೆರ್ನಾಂಡಿಸ್, ಶ್ರೀಕಾಂತ್, ದೀಕ್ಷಿತ್ ಉರ್ಲಾಂಡಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here