ಸಂಪ್ಯ ಹೆಡ್ ಕಾನ್ಸ್‌ಟೇಬಲ್ ಸುಂದರ ಅವರ ಬೀಳ್ಕೊಡುಗೆ ಕಾರ್ಯಕ್ರಮ 

0

ನಿಡ್ಪಳ್ಳಿ;ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಳೆದ ಮೂರೂವರೆ ವರ್ಷದಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇದೀಗ ಪದೋನ್ನತಿ ಹೊಂದಿ ಎ ಎಸ್ ಐ ಆಗಿ ಪುತ್ತೂರು ನಗರ ಠಾಣೆಗೆ ವರ್ಗಾವಣೆ ಹೊಂದಿರುವ ಸುಂದರರವರಿಗೆ ಪುತ್ತೂರು ಗ್ರಾಮಾಂತರ ಠಾಣಾ ಅಧಿಕಾರಿ ಸಿಬ್ಬಂದಿಯವರಿಂದ ಬೀಳ್ಕೊಡುಗೆ ಕಾರ್ಯಕ್ರಮ ಮೆ.13 ರಂದು ಸಂಪ್ಯ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕ ರಂಗಶಾಮಯ್ಯ ವೈ.ಅರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪೊಲೀಸ್ ಉಪನಿರೀಕ್ಷಕ ಜಂಬು ರಾಜ್ ಮಹಾಜನ್ ರವರು ಉಪಸ್ಥಿತರಿದ್ದರು.ಠಾಣಾ ಅಧಿಕಾರಿ ಸಿಬ್ಬಂದಿಯವರು ಅಭಿಪ್ರಾಯ ವ್ಯಕ್ತಪಡಿಸಿದರು. ಕಾನ್ಸ್‌ಟೇಬಲ್  ಪ್ರವೀಣ್ ರವರು ಕಾರ್ಯಕ್ರಮ ನಿರೂಪಿಸಿ ಸಿಬ್ಬಂದಿ ಪಿ.ಎಸ್ ವೆಂಕಪ್ಪರವರು ವಂದಿಸಿದರು.

LEAVE A REPLY

Please enter your comment!
Please enter your name here