ಹೊಸ್ಮಠ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಸ್ಕೂಟರ್ ಡಿಕ್ಕಿ-ಗಾಯ

0

ಕಡಬ: ರಸ್ತೆ ಬದಿ ನಿಂತುಕೊಂಡು ಮಾತನಾಡುತ್ತಿದ್ದ ವ್ಯಕ್ತಿಯೋರ್ವರಿಗೆ ಸ್ಕೂಟರ್ ಡಿಕ್ಕಿಯಾಗಿ ಗಾಯಗೊಂಡಿರುವ ಘಟನೆ ಮೇ.11ರಂದು ರಾತ್ರಿ ಕುಟ್ರುಪ್ಪಾಡಿ ಗ್ರಾಮದ ಹೊಸಮಠ ಜಂಕ್ಷನ್‌ನಲ್ಲಿ ನಡೆದಿದೆ.


ಕುಟ್ರುಪ್ಪಾಡಿ ಗ್ರಾಮದ ಉಳಿಪು ನಿವಾಸಿ ವಿನಯ್(30ವ.)ಗಾಯಗೊಂಡವರಾಗಿದ್ದಾರೆ. ವಿನಯ್ ಅವರು ಸ್ನೇಹಿತ ಮಾಧವ ಎಂಬವರ ಜೊತೆ ಹೊಸಮಠ ಜಂಕ್ಷನ್‌ನಲ್ಲಿ ರಸ್ತೆ ಬದಿಯಲ್ಲಿ ನಿಂತು ಮಾತನಾಡುತ್ತಿದ್ದ ವೇಳೆ ಕಡಬದಿಂದ ಉಪ್ಪಿನಂಗಡಿ ಕಡೆಗೆ ದೇವದಾಸ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕೂಟರ್(ಕೆಎ 21, ಇಬಿ 6548) ಡಿಕ್ಕಿಯಾಗಿದೆ. ವಿನಯ್ ಅವರನ್ನು ಸ್ಕೂಟರ್ ಸ್ವಲ್ಪ ದೂರ ಮುಂದಕ್ಕೆ ಎಳೆದುಕೊಂಡು ಹೋಗಿದೆ. ಘಟನೆಯಲ್ಲಿ ಸ್ಕೂಟರ್ ಸವಾರ ದೇವದಾಸ ಹಾಗೂ ಸಹಸವಾರನಿಗೂ ಸಣ್ಣ-ಪುಟ್ಟ ಗಾಯವಾಗಿದೆ. ಗಾಯಾಳು ವಿನಯ್ ಅವರಿಗೆ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಮ್.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿನಯ್ ಅವರ ಸಹೋದರ ಜನಾರ್ದನ ಕೆ.ಎಂಬವರು ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

LEAVE A REPLY

Please enter your comment!
Please enter your name here