ಮೇ.16: ವಿದ್ಯುತ್ ನಿಲುಗಡೆ

0

ಪುತ್ತೂರು: ಉಪ್ಪಿನಂಗಡಿ – ಪುತ್ತೂರು ಚತುಷ್ಪಥ ಮಾರ್ಗ ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕಾಂಚನ ಮತ್ತು 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಮತ್ತು ಕೆಮ್ಮಾರ ಫೀಡರ್‌ನಲ್ಲಿ ಮೇ.16 ರಂದು ಪೂರ್ವಾಹ್ನ ಗಂಟೆ 10:೦೦ ರಿಂದ ಅಪರಾಹ್ನ 5:೦೦ ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.


ಆದುದರಿಂದ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರ ಮತ್ತು 110/33/11ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಬಜತ್ತೂರು ಮತ್ತು ಉಪ್ಪಿನಂಗಡಿ ಗ್ರಾಮದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here