ಸುಳ್ಯಪದವು ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಅಗೇಲು ಸೇವೆ

0

ಬಡಗನ್ನೂರು: ಸ್ವಾಮಿ ಕೊರಗಜ್ಜ ಕ್ಷೇತ್ರ ಶಬರಿನಗರ ಸುಳ್ಯಪದವು ಇಲ್ಲಿ ಮೇ .14ರಂದು  ಸಂಕ್ರಮಣ ಅಂಗವಾಗಿ ಅಗೇಲು ಸೇವೆ  ಹಾಗೂ ಶ್ರೀ ಗುಳಿಗ ದೈವಕ್ಕೆ ಕಳಸ ಸೇವೆ ನಡೆಯಿತು. ಬಳಿಕ ಸುಮಾರು 150 ಮಿಕ್ಕಿ ಭಕ್ತಾಧಿಗಳು ಅನ್ನಪ್ರಸಾದ ಬೋಜನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಸುಮಾರು 80 ಕ್ಕೂ ಮಿಕ್ಕಿ ಅಗೇಲು ಸೇವೆ ಮತ್ತು, ಕಳಸ ಸೇವೆ ಸಲ್ಲಿಸಿ ತಮ್ಮ ತಮ್ಮ ಬೇಡಿಕೆಗಳು ಈಡೇರಿಸುವಂತೆ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಶಬರಿನಗರ, ಕಾರ್ಯದರ್ಶಿ ಪ್ರಕಾಶ್ ಮರದಮೂಲೆ, ಉಪಾಧ್ಯಕ್ಷ ಸದಾನಂದ ಬೋಳಂಕೂಡ್ಲು, ಕೋಶಾಧಿಕಾರಿ ಭಾಸ್ಕರ ಹೆಗ್ಗಡೆ ಶಬರಿನಗರ, ಪ್ರಧಾನ ಪೂಜಾ ಕರ್ಮಿ ಮಾದವ ಸಾಲಿಯಾನ್ ಹಾಗೂ ಊರ ಭಕ್ತಾದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here