ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಂದರ್ಭ ವ್ಯಕ್ತಿ ಮೃತ್ಯು -ದೂರು ದಾಖಲು

0

ಪುತ್ತೂರು: ಪುತ್ತೂರು ಖಾಸಗಿ ಆಸ್ಪತ್ರೆಯೊಂದರಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮೇ.15ರ ಸಂಜೆ ನಡೆದಿದೆ. ವ್ಯಕ್ತಿ ಮೃತಪಟ್ಟ ಬಗ್ಗೆ ಮಾಹಿತಿ ತಿಳಿದು ರಾತ್ರಿ ವೇಳೆ ಮೃತರ ಕಡೆಯ ನೂರಾರು ಮಂದಿ ಆಸ್ಪತ್ರೆಯಲ್ಲಿ ಜಮಾಯಿಸಿ ವೈದ್ಯರ ನಿರ್ಲಕ್ಷ್ಯದಿಂದ ವ್ಯಕ್ತಿ ಮೃತಪಟ್ಟಿದ್ದಾರೆಂದು ಆರೋಪಿಸಿದ್ದಾರೆ.


ಬಂಟ್ವಾಳ ತಾಲೂಕಿನ ಉಳಿಗ್ರಾಮದ ಪಿಲಿಬೈಲು ಅಣ್ಣಿ ಗೌಡ ಅವರ ಪುತ್ರ ಕೃಷ್ಣಪ್ಪ(51ವ)ರವರು ಮೃತಪಟ್ಟವರು. ಘಟನೆ ಕುರಿತು ಅವರ ತಮ್ಮ ವಸಂತ ಗೌಡ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ನಾವು ಕೂಲಿ ಕೆಲಸ ಮಾಡಿಕೊಂಡಿದ್ದು, ನನ್ನ ಅಣ್ಣ ಕೃಷ್ಣಪ್ಪ ಗೌಡ ಅವರಿಗೆ ಅಸೌಖ್ಯದ ಕಾರಣ ಮೇ.14ರಂದು ಅವರನ್ನು ಮನೆಯಿಂದ ಕರೆದುಕೊಂಡು ಬಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದು ಕೊಂಡು ಬಂದಿದ್ದೆವು. ಅಲ್ಲಿ ಅವರನ್ನು ಒಳ ರೋಗಿಯನ್ನಾಗಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಯ ಸಂದರ್ಭ ಮೇ.15ರಂದು ಅವರು ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಲ್ಲಿನ ವೈದ್ಯರು ಸರಿಯಾಗಿ ಚಿಕಿತ್ಸೆ ನೀಡದಿರುವುದರಿಂದ ಅವರು ಮೃತಪಟ್ಟಿರಬಹುದು ಎಂದು ಸಂಶಯವಿದೆ. ಈ ಕುರಿತು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ದೂರಿನಲ್ಲಿ ತಿಳಿಸಲಾಗಿದೆ. ಮೃತರು ಪತ್ನಿ ಸರೋಜ, ಪುತ್ರ ಪುನಿತ್ ಅವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here