ನೆಲ್ಯಾಡಿ: ಸುಗಮ ಸಂಗೀತ, ಕೀಬೋರ್ಡ್ ತರಬೇತಿ ಕಾರ್ಯಗಾರ

0

ನೆಲ್ಯಾಡಿ: ಲಹರಿ ಸಂಗೀತ ಕಲಾಕೇಂದ್ರ ಐಐಸಿಟಿ ನೆಲ್ಯಾಡಿ ಇದರ ವತಿಯಿಂದ ಸಂಗೀತಾಸಕ್ತ ಮಕ್ಕಳಿಗೆ ಎರಡು ದಿವಸಗಳ ಸುಗಮ ಸಂಗೀತ ಮತ್ತು ಕೀಬೋರ್ಡ್ ತರಬೇತಿ ಕಾರ್ಯಗಾರ ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.


ಸಂತಜಾರ್ಜ್ ವಿದ್ಯಾಸಂಸ್ಥೆಗಳ ಆಡಳಿತ ಮಂಡಳಿಯ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಸಂತಜಾರ್ಜ್ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು ರವೀಂದ್ರ ಟಿ., ಶುಭಹಾರೈಸಿದರು. ನೆಲ್ಯಾಡಿ ವರ್ತಕ ಸಂಘದ ಅಧ್ಯಕ್ಷ ಸತೀಶ್. ಕೆ.ಎಸ್. ಅಧ್ಯಕ್ಷತೆ ವಹಿಸಿದ್ದರು. ಪೋಷಕರ ಪ್ರತಿನಿಧಿ ಉದಯ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಲಹರಿ ಸಂಗೀತ ಕಲಾಕೇಂದ್ರದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಂಗೀತ ಗುರು ವಿಶ್ವನಾಥ ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮೊದಲನೆಯ ದಿವಸದ ತರಬೇತಿಯಲ್ಲಿ ವಿದ್ಯಾರ್ಥಿಗಳಿಗೆ ಶಾಸ್ತ್ರೀಯ ಸಂಗೀತ ಮತ್ತು ಕೀಬೋರ್ಡ್ ತರಗತಿ ನಡೆಯಿತು. ಎರಡನೆಯ ದಿವಸ ವೆಸ್ಟರ್ನ್ ಕಾರ್ಡ್ಸ್ ಮತ್ತು ನೊಟೇಶನ್‌ಗಳ ಬಗ್ಗೆ ಮಂಗಳೂರಿನ ಪ್ರಸಿದ್ಧ ಸಂಗೀತ ನಿರ್ದೇಶಕರಾದ ಗುರು ಬಾಯಾರ್ ಇವರಿಂದ ತರಗತಿ ನಡೆಯಿತು. ಸಮಾರೋಪ ಕಾರ್ಯಕ್ರಮದಲ್ಲಿ ಸಂತ ಜಾರ್ಜ್ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು ವೆಂಕಟರಮಣ ಆರ್, ರವೀಂದ್ರ ಟಿ., ವರ್ತಕ ಸಂಘದ ಅಧ್ಯಕ್ಷ ಸತೀಶ್ ಕೆ.ಎಸ್, ಸದಸ್ಯರಾದ ರವಿಚಂದ್ರ ಆಚಾರ್ಯ, ದಿವಾಕರ ಭಟ್ ಹಾಗೂ ಪೋಷಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here