ಬೆಳ್ತಂಗಡಿ: ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಬಂಧನಕ್ಕೆ ಧನಂಜಯ ಸರ್ಜಿ ಖಂಡನೆ

0

ಪುತ್ತೂರು: ಬೆಳ್ತಂಗಡಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಬಂಧನ ಮಾಡಿರುದನ್ನು ವಿಧಾನ ಪರಿಷತ್ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಖಂಡಿಸಿದ್ದಾರೆ.


ಸಕ್ರಿಯವಾಗಿರುವ ಕಾರ್ಯಕರ್ತರನ್ನು ಕೇಸ್ ದಾಖಲಿಸಿ, ಉಳಿದ ಕಾರ್ಯಕರ್ತರನ್ನು ಬೆದರಿಸುವ, ನಮ್ಮ ಕಾರ್ಯಕರ್ತರನ್ನು ಹಣಿಯಲು ಪ್ರಯತ್ನಿಸುವುದು ಕಾಂಗ್ರೆಸ್ಸಿನ ಹಳೆ ಚಾಳಿ. ಕೊಲೆ ಸುಲಿಗೆ ಮಾಡಿರುವವರನ್ನು ಬಂಧಿಸಲು ಹಿಂದೆ ಮುಂದೆ ನೋಡುವ ಕಾಂಗ್ರೆಸ್ ಸರ್ಕಾರ ಸುಳ್ಳು ಕೇಸಿನ ಆಧಾರದ ನಿನ್ನೆ ಮಧ್ಯರಾತ್ರಿ ಉಗ್ರಗಾಮಿಯನ್ನು ನಡೆಸಿಕೊಳ್ಳುವಂತೆ ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷರನ್ನು ಬಂಧಿಸಿದೆ.

ಬೆಳ್ತಂಗಡಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್


ಆಡಳಿತ ಯಂತ್ರವನ್ನು ಉಪಯೋಗಿಸಿ, ಪೊಲೀಸ್ ದೌರ್ಜನ್ಯದಿಂದ, ನಿಮ್ಮ ಕೀಳುಮಟ್ಟದ ತಂತ್ರಗಳಿಂದ ನಮ್ಮ ಕಾರ್ಯಕರ್ತರನ್ನು ಬೆದರಿಸಲು ಸಾಧ್ಯವಿಲ್ಲ. ನಮ್ಮ ಕಾರ್ಯಕರ್ತರ ಜೊತೆ ಸಂಘಟನೆ ನಿಲ್ಲಲಿದೆ, ಏನೇ ಬರಲಿ ಕಾರ್ಯಕರ್ತರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here