![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಪುರಸ್ಕಾರ ಸಮಾರಂಭ ಕಾರ್ಯಕ್ರಮ ನಡೆಯಿತು.
ಹತ್ತನೇ ತರಗತಿಯ 102 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು ಅವರೆಲ್ಲರನ್ನು ಈ ಸಂದರ್ಭದಲ್ಲಿ ಪುರಸ್ಕರಿಸಲಾಯಿತು.
ಕಾರ್ಯಕ್ರಮದ ಅತಿಥಿಯಾಗಿ ಆಗಮಿಸಿದ ಹಿರಿಯ ವಿದ್ಯಾರ್ಥಿನಿ ಡಾ. ಅಧೀಶ ಶೆಟ್ಟಿ (ಎಮ್ ಬಿ ಬಿ ಎಸ್ ನಲ್ಲಿಯು 2ನೇ ರ್ಯಾಂಕ್ ವಿಜೇತೆ) ತನ್ನ ಶಾಲಾ ದಿನಗಳನ್ನು ನೆನೆಸಿಕೊಂಡು ಸ್ಪೂರ್ತಿದಾಯಕ ಮಾತುಗಳನ್ನಾಡಿದರು.
![](https://puttur.suddinews.com/wp-content/uploads/2024/05/Untitled-1-26.jpg)
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಎಲ್. ಎನ್.ಕೂಡೂರು ರವರು ಉತ್ತಮ ಫಲಿತಾಂಶಕ್ಕೆ ವಿದ್ಯಾರ್ಥಿಗಳನ್ನು ಅಭಿನಂದಿಸಿ ಶಾಲಾ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿದರು.
ಜೊತೆಗೆ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ಭಾಗವಹಿಸಿದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ ಪ್ರಶಸ್ತಿ ಪತ್ರಗಳನ್ನು ಕೂಡ ವಿತರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಜಯರಾಮ್ ರೈ ರವರು ವಿದ್ಯಾರ್ಥಿಗಳನ್ನು ಪ್ರಶಂಶಿಸಿ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಕೋಶಧಿಕಾರಿಗಳಾದ ಪ್ರಭಾಕರ ಶೆಟ್ಟಿ ದಂಬೆಕಾನ, ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಹಸನ್ ವಿಟ್ಲ, ಗೋಕುಲ್ ಶೇಟ್ ವಿಟ್ಲ, ಜೆಸಿಐ ಅಧ್ಯಕ್ಷರಾದ ಸಂತೋಷ್ ಕುಮಾರ್, ಶಾಲಾ ಆಡಳಿತಾಧಿಕಾರಿ ರಾಧಾಕೃಷ್ಣ ಎ, ಉಪ ಪ್ರಾಂಶುಪಾಲೆ ಜ್ಯೋತಿ ಶೆಣೈ, ಉಪಸ್ಥಿತರಿದ್ದರು. ಸಹಶಿಕ್ಷಕಿ ತೇಜಸ್ವಿನಿ ಪ್ರಾರ್ಥಿಸಿದರು, ಸಹ ಶಿಕ್ಷಕಿ ತುಳಸಿ, ಜಯಶ್ರೀ ಹಾಗೂ ಸಹಶಿಕ್ಷಕಿ ರಶ್ಮಿ. ಕೆ. ಕಾರ್ಯಕ್ರಮ ನಿರೂಪಿಸಿದರು.