ನಾಳೆ(ಮೇ.21) ಡಾ.ರಾಮಕೃಷ್ಣ ಆಚಾರ್ ಪಾಲ್ತಾಡಿ ಅವರಿಗೆ ಶ್ರದ್ಧಾಂಜಲಿ ಸಭೆ

0

ಪುತ್ತೂರು: ಸಾಹಿತಿ, ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಆಗಿದ್ದ ಡಾ. ರಾಮಕೃಷ್ಣ ಆಚಾರ್ ಪಾಲ್ತಾಡಿ ಅವರಿಗೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಮೇ.21ರಂದು ಸಂಜೆ 4ಕ್ಕೆ ಶ್ರದ್ಧಾಂಜಲಿ ಸಭೆ ನಡೆಯಲಿದೆ.
ಬೊಳುವಾರು ವಿಶ್ವ ಬ್ರಾಹ್ಮಣ ಸೇವಾ ಸಂಘ ಹಾಗೂ ಬೊಳುವಾರು ವಿಶ್ವಕರ್ಮ ಯುವ ಸಮಾಜದ ಆಶ್ರಯದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿದೆ. ಡಾ. ರಾಮಕೃಷ್ಣ ಆಚಾರ್ ಪಾಲ್ತಾಡಿ ಅವರು ಬೊಳುವಾರು ವಿಶ್ವ ಬ್ರಾಹ್ಮಣ ಸೇವಾ ಸಂಘದ ಸ್ಥಾಪಕ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ವಿಶ್ವಕರ್ಮ ಯುವ ಸಮಾಜದ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಶ್ರದ್ಧಾಂಜಲಿ ಸಭೆಯಲ್ಲಿ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ ಹಿತೈಷಿಗಳು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here