ಮಂಚಿಯಲ್ಲಿ ಹಿಟ್‌ ಆ್ಯಂಡ್‌ ರನ್‌ – ನಿವೃತ್ತ ಸೈನಿಕ ಚಿದಾನಂದ ಕಾಮತ್‌ ಮೃತ್ಯು

0

ಪುತ್ತೂರು: ಕಾರೊಂದು ಆಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಇಂದು ಮಧ್ಯಾಹ್ನ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ನಡೆದಿತ್ತು. ಘಟನೆಯಲ್ಲಿ ಆಕ್ಟೀವಾ ಸವಾರ ಪುತ್ತೂರು ನೆಹರು ನಗರ ರಕ್ತೇಶ್ವರಿ ಗುಡಿ ಬಳಿಯ ನಿವಾಸಿ ನಿವೃತ್ತ ಸೈನಿಕ ಚಿದಾನಂದ ಕಾಮತ್‌ (55) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮುಡಿಪುನಲ್ಲಿರುವ ಇನ್ಫೋಸೀಸ್‌ ಸಂಸ್ಥೆಯ ಸೆಕ್ಯುರಿಟಿ ಗಾರ್ಡ್‌ ಉದ್ಯೋಗದಲ್ಲಿದ್ದ ಕಾಮತ್‌, ತಾಯಿಯೊಂದಿಗೆ ವಾಸವಾಗಿದ್ದರು. ಮೃತರು ತಾಯಿ, ಪುತ್ತೂರು ವಿವೇಕಾನಂದ ಕಾಲೇಜಿನ ಉಪನ್ಯಾಸಕ ರಮಾನಂದ ಕಾಮತ್‌,‌ ಪುತ್ತೂರು ಕಾಮತ್ ಸ್ವೀಟ್ಸ್‌ ನ ಮಂಜುನಾಥ್‌ ಕಾಮತ್‌ ಸೇರಿದಂತೆ 5 ಸಹೋದರರನ್ನು ಅಗಲಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here