ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ “ಅಂಬರಪ್ಪು ಫ್ಯಾಮಿಲಿ” ತುಳು ವೆಬ್ ಸೀರೀಸ್ ಮುಹೂರ್ತ

0

ಪುತ್ತೂರು: ಫೋಕಸ್ ಫಿಲಂ ಫ್ಯಾಕ್ಟರಿ ಅರ್ಪಿಸುವ, ಸವಿ-ಅಮೋಘವರ್ಷಿಣಿ ನಿರ್ಮಾಣದ, ಪ್ರಜ್ವಲ್ ಕುಮಾರ್ ಅತ್ತಾವರ ನಿರ್ದೇಶನದ ಹೊಸ ತುಳು ವೆಬ್ ಸೀರೀಸ್ “ಅಂಬರಪ್ಪು ಫ್ಯಾಮಿಲಿ” ಯ ಚಿತ್ರೀಕರಣದ ಮುಹೂರ್ತವು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಿತು.


ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಕ್ಯಾಮರಾಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಮುಹೂರ್ತ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ಸುಧಾಕರ್ ರಾವ್ ಆರ್ಯಾಪು ಪ್ರಾರ್ಥನೆ ನೆರವೇರಿಸಿ ಚಿತ್ರತಂಡಕ್ಕೆ ಶುಭ ಆಶೀರ್ವಾದ ನೀಡಿದರು. ಪುತ್ತೂರಿನ ಉದ್ಯಮಿ ಶಿವರಾಮ್ ಆಳ್ವ, ವಿಜಯಲಕ್ಷ್ಮಿ ಹಾಗೂ ಚಿತ್ರತಂಡದವರು ಉಪಸ್ಥಿತರಿದ್ದರು.


ತುಳುವಿನ ಹಿಟ್ ಧಾರಾವಾಹಿ “ಅಂಬರ ಮರ್ಲೆರ್” returns ತಂಡವು ಈ ಬಾರಿ ಹೊಸ ತುಳು ವೆಬ್ ಸೀರೀಸ್ ನೊಂದಿಗೆ ಬರುತ್ತಿದೆ. ವೆಬ್ ಸೀರೀಸ್ ನ ನಾಯಕ ನಟರಾಗಿ ನವೀನ್ ನೆರೋಲ್ತಡಿ ಅಭಿನಯಿಸುತ್ತಿದ್ದು, ನಾಯಕಿಯಾಗಿ ಸಿಂಚನ ಪಿ ರಾವ್ ಬಣ್ಣ ಹಚ್ಚಲಿದ್ದಾರೆ. ತುಳುವಿನ ಹಾಸ್ಯ ದಿಗ್ಗಜರಾದ ಸುಂದರ್ ರೈ ಮಂದಾರ, ದೀಪಕ್ ರೈ ಪಾಣಾಜೆ, ಸುನಿಲ್ ನೆಲ್ಲಿಗುಡ್ಡೆ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದು ಉಳಿದಂತೆ ರಂಜನ್ ಬೋಳೂರು, ಯದು ವಿಟ್ಲ, ಪ್ರತ್ವಿನ್ ಪೊಳಲಿ, ನಮಿತಾ ಕಿರಣ್, ಜಗನ್ನಿವಾಸ್ ಶೆಟ್ಟಿ,ಅಮಿತ್ ಪ್ರಭು, ಅಶೋಕ್ ಬನ್ನೂರು ಮುಂತಾದವರು ನಟಿಸಲಿದ್ದಾರೆ.


ಕಥೆ, ಚಿತ್ರಕಥೆ, ನಿರ್ದೇಶನದ ಜವಾಬ್ದಾರಿ ಪ್ರಜ್ವಲ್ ಕುಮಾರ್ ಅತ್ತಾವರ ನಿರ್ವಹಿಸುತ್ತಿದ್ದು ಸಂಭಾಷಣೆಯನ್ನು ಸೋಮನಾಥ ಶೆಟ್ಟಿ ಮಂಗಲ್ಪಾಡಿ ಬರೆದಿದ್ದಾರೆ. ಛಾಯಾಗ್ರಹಣ ಹಾಗೂ ಸಂಕಲನ ಧನರಾಜ್ ರೈ ಪುತ್ತೂರು, ಸಂಗೀತ ಡೋಲ್ವಿನ್ ಕೊಳಲಗಿರಿ, ಪ್ರಸಾದನ ಪ್ರಸಾದ್ ಕೊಯಿಲ, ಪ್ರಚಾರ ಕಲೆ ಗಣೇಶ್ ಕೆ, ಧ್ವನಿ ಮುದ್ರಣ ಕಿಶೋರ್ ಕುಮಾರ್ ಉಪ್ಪಿನಂಗಡಿ, ಬೆಳಕು ಸಹಾಯ ಪ್ರಜ್ವಲ್ ಆಚಾರ್ಯ, ಬೆಳಕು ಹಾಗೂ ಧ್ವನಿ ಮುದ್ರಣ ಯುನಿಟ್ ರಾಜ್ ಪ್ರೊಡಕ್ಷನ್ಸ್ ಪುತ್ತೂರು ತಾಂತ್ರಿಕ ತಂಡದಲ್ಲಿ ಇದ್ದಾರೆ. ಪುತ್ತೂರಿನ ಆಸುಪಾಸಿನಲ್ಲಿ ಈ ವೆಬ್ ಸೀರೀಸ್ ನ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡದ ಮುಖ್ಯಸ್ಥರಾದ ಸುಂದರ್ ರೈ ಮಂದಾರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here