ನೈರುತ್ಯ ಪದವೀಧರ, ಶಿಕ್ಷಕ ಕ್ಷೇತ್ರಗಳ ಚುನಾವಣೆ ಬಿಜೆಪಿ ಪಕ್ಷದ ಮತದಾರರ ಸಂವಾದ

0

ಪುತ್ತೂರು: ರಾಜ್ಯದಲ್ಲಿ ಜನ ವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸನ್ನು ನಿಯಂತ್ರಣದಲ್ಲಿ ಬೇಕಾದರೆ ವಿಧಾನ ಪರಿಷತ್‌ನಲ್ಲಿ ಮೈತ್ರಿಕೂಟದ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.

ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರಗಳ ಚುನಾವಣೆ ಸಂಬಂಧಿಸಿದಂತೆ ಮೇ.20ರಂದು ಕಲ್ಲೇಗ ಭಾರತ್ ಮಾತಾ ಸಭಾಂಗಣದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಜನ ವಿರೋಧಿ ಮಸೂದೆಗಳನ್ನು ತಡೆಯಬೇಕಾದರೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಪಕ್ಷಗಳ ಬಹುಮತ ಅಗತ್ಯ. ಹಾಗಾಗಿ ಸಮರ್ಥರಾದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರನ್ನು ಪ್ರಚಂಡ ಮತಗಳಿಂದ ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದರು.

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಊಟ ಶರೀರಕ್ಕೆ ತೃಪ್ತಿ ಕೊಡುತ್ತೆ, ಪಾಠ ಮೆದುಳಿಗೆ ತೃಪ್ತಿ ಕೊಡುತ್ತೆ, ಆಟ ಮನಸ್ಸಿಗೆ ತೃಪ್ತಿ ಕೊಡುತ್ತೆ, ನಿಜವಾದ ನಿಸ್ವಾರ್ಥ ಸೇವೆ ಮನಸ್ಸಿಗೆ ತೃಪ್ತಿ ಕೊಡುತ್ತದೆ, ಇಂತಹ ಸೇವಾ ಮನೋಭಾವನೆಯೊಂದಿಗೆ ವೈದ್ಯಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಪದವೀಧರ ಕ್ಷೇತ್ರದ ಸಮಸ್ಯೆಗಳ ಕುರಿತು ಸಂಪೂರ್ಣ ಮಾಹಿತಿ ನನಗಿದ್ದು, ಮತ ನೀಡುವ ಮೂಲಕ ಸೇವೆ ಮಾಡಲು ಅವಕಾಶ ಮಾಡಿಕೊಡುವಂತೆ ಅವರು ಮನವಿ ಮಾಡಿದರು.
ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಮಾತನಾಡಿ, ಪರಿಷತ್ ಸದಸ್ಯನಾಗಿ ಈಗಾಗಲೇ ನಾನು ಸೇವೆ ಸಲ್ಲಿಸಿದ್ದೇನೆ. ಶಿಕ್ಷಕರು, ನೌಕರರ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ. ನಿಮ್ಮ ಸಮಸ್ಯೆಗಳಿಗೆ ನಾನು ಸ್ಪಂದಿಸಲು ಸದಾ ಬದ್ಧನಾಗಿದ್ದೇನೆ. ತಿದ್ದಿ ತೀಡುತ್ತಾ ಸದೃಢ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವ ಶಿಕ್ಷಕರು ಹಾಗೂ ಪದವೀಧರ ಮತದಾರರು ಮೈತ್ರಿ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕಂಪಲ ಮಾತನಾಡಿ, ಮೈತ್ರಿ ಕೂಟದ ಅಭ್ಯರ್ಥಿಗಳ ಪರವಾಗಿ ಮತವನ್ನು ಯಾಚಿಸಿದರು.
ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಜಗನ್ನಿವಾಸ ರಾವ್, ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ನೈರುತ್ಯ ಪದವಿದರ ಕ್ಷೇತ್ರದ ಮಂಗಳೂರು ಜಿಲ್ಲಾ ಸಹ ಸಂಚಾಲಕರಾದ ವಿಕಾಸ್ ಪುತ್ತೂರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ, ಬಿಜೆಪಿ ರಾಜ್ಯ ಒಬಿಸಿ ಮೋರ್ಚಾದ ಕಾರ್ಯದರ್ಶಿ ಆರ್.ಸಿ ನಾರಾಯಣ, ಯುವರಾಜ ಪೆರಿಯತ್ತೋಡಿ, ಪುರುಷೋತ್ತಮ ಮುಂಗ್ಲಿಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪುತ್ತೂರು: ರಾಜ್ಯದಲ್ಲಿ ಜನ ವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸನ್ನು ನಿಯಂತ್ರಣದಲ್ಲಿ ಬೇಕಾದರೆ ವಿಧಾನ ಪರಿಷತ್‌ನಲ್ಲಿ ಮೈತ್ರಿಕೂಟದ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಹೇಳಿದರು.

ಕರ್ನಾಟಕ ವಿಧಾನ ಪರಿಷತ್ ನೈರುತ್ಯ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರಗಳ ಚುನಾವಣೆ ಸಂಬಂಧಿಸಿದಂತೆ ಮೇ.20ರಂದು ಕಲ್ಲೇಗ ಭಾರತ್ ಮಾತಾ ಸಭಾಂಗಣದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಜನ ವಿರೋಧಿ ಮಸೂದೆಗಳನ್ನು ತಡೆಯಬೇಕಾದರೆ ವಿಧಾನ ಪರಿಷತ್‌ನಲ್ಲಿ ಬಿಜೆಪಿ ಪಕ್ಷಗಳ ಬಹುಮತ ಅಗತ್ಯ. ಹಾಗಾಗಿ ಸಮರ್ಥರಾದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರನ್ನು ಪ್ರಚಂಡ ಮತಗಳಿಂದ ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದರು.

ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ಊಟ ಶರೀರಕ್ಕೆ ತೃಪ್ತಿ ಕೊಡುತ್ತೆ, ಪಾಠ ಮೆದುಳಿಗೆ ತೃಪ್ತಿ ಕೊಡುತ್ತೆ, ಆಟ ಮನಸ್ಸಿಗೆ ತೃಪ್ತಿ ಕೊಡುತ್ತೆ, ನಿಜವಾದ ನಿಸ್ವಾರ್ಥ ಸೇವೆ ಮನಸ್ಸಿಗೆ ತೃಪ್ತಿ ಕೊಡುತ್ತದೆ, ಇಂತಹ ಸೇವಾ ಮನೋಭಾವನೆಯೊಂದಿಗೆ ವೈದ್ಯಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಾ ಬಂದಿದ್ದೇನೆ. ಪದವೀಧರ ಕ್ಷೇತ್ರದ ಸಮಸ್ಯೆಗಳ ಕುರಿತು ಸಂಪೂರ್ಣ ಮಾಹಿತಿ ನನಗಿದ್ದು, ಮತ ನೀಡುವ ಮೂಲಕ ಸೇವೆ ಮಾಡಲು ಅವಕಾಶ ಮಾಡಿಕೊಡುವಂತೆ ಅವರು ಮನವಿ ಮಾಡಿದರು.
ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಮಾತನಾಡಿ, ಪರಿಷತ್ ಸದಸ್ಯನಾಗಿ ಈಗಾಗಲೇ ನಾನು ಸೇವೆ ಸಲ್ಲಿಸಿದ್ದೇನೆ. ಶಿಕ್ಷಕರು, ನೌಕರರ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ. ನಿಮ್ಮ ಸಮಸ್ಯೆಗಳಿಗೆ ನಾನು ಸ್ಪಂದಿಸಲು ಸದಾ ಬದ್ಧನಾಗಿದ್ದೇನೆ. ತಿದ್ದಿ ತೀಡುತ್ತಾ ಸದೃಢ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವ ಶಿಕ್ಷಕರು ಹಾಗೂ ಪದವೀಧರ ಮತದಾರರು ಮೈತ್ರಿ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕಂಪಲ ಮಾತನಾಡಿ, ಮೈತ್ರಿ ಕೂಟದ ಅಭ್ಯರ್ಥಿಗಳ ಪರವಾಗಿ ಮತವನ್ನು ಯಾಚಿಸಿದರು.
ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ರಾಧಾಕೃಷ್ಣ ಆಳ್ವ, ನಗರ ಮಂಡಲ ಅಧ್ಯಕ್ಷ ಜಗನ್ನಿವಾಸ ರಾವ್, ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ನೈರುತ್ಯ ಪದವಿದರ ಕ್ಷೇತ್ರದ ಮಂಗಳೂರು ಜಿಲ್ಲಾ ಸಹ ಸಂಚಾಲಕರಾದ ವಿಕಾಸ್ ಪುತ್ತೂರು, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ, ಬಿಜೆಪಿ ರಾಜ್ಯ ಒಬಿಸಿ ಮೋರ್ಚಾದ ಕಾರ್ಯದರ್ಶಿ ಆರ್.ಸಿ ನಾರಾಯಣ, ಯುವರಾಜ ಪೆರಿಯತ್ತೋಡಿ, ಪುರುಷೋತ್ತಮ ಮುಂಗ್ಲಿಮನೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here